ಮಲ್ಪೆ ಬೀಚ್ನಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ಶಿವಮೊಗ್ಗದ ಮೂವರು ವಿದ್ಯಾರ್ಥಿಗಳ ರಕ್ಷಣೆ!
ಉಡುಪಿಯ ಮಲ್ಪೆ ಬೀಚ್ನಲ್ಲಿ ಆಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗುತ್ತಿದ್ದ ಶಿವಮೊಗ್ಗ ಮೂಲದ ಮೂವರು ವಿದ್ಯಾರ್ಥಿಗಳನ್ನು ಮಲ್ಪೆ ಬೀಚ್ ಜೀವರಕ್ಷಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.
ಬುಧವಾರ ಮಧ್ಯಾಹ್ನ 2ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಶಿವಮೊಗ್ಗ ಜಿಲ್ಲೆಯ ಕಾಶಿಪುರದ ನಿತಿನ್ ಮತ್ತು ಮಂಜುನಾಥ್, ತರೀಕೆರೆ ನಿವಾಸಿ ಕಿರಣ್ ಎಂಬ ವಿದ್ಯಾರ್ಥಿಗಳನ್ನು ಅಪಾಯದಿಂದ ಪಾರು ಮಾಡಲಾಗಿದೆ.
ಶಿವಮೊಗ್ಗ ಕಾಲೇಜಿನ ಸುಮಾರು 35 ವಿದ್ಯಾರ್ಥಿಗಳು ಮಲ್ಪೆ ಬೀಚ್ಗೆ ಪ್ರವಾಸ ಬಂದಿದ್ದರು. ಈ ವೇಳೆ ವಿದ್ಯಾರ್ಥಿಗಳು ಸಮದ್ರದಲ್ಲಿ ಆಡುತ್ತಿದ್ದಾಗ ಮೂವರು ವಿದ್ಯಾರ್ಥಿಗಳು ಅಲೆಗಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದರೆನ್ನಲಾಗಿದೆ.
ತಕ್ಷಣ ಕಾರ್ಯಪ್ರವೃತ್ತರಾದ ಮಲ್ಪೆ ಬೀಚ್ ಜೀವ ರಕ್ಷಕ ದಳ ಸಿಬ್ಬಂದಿ ಮಧುಕರ್ ಸಾಲ್ಯಾನ್ ಹಾಗೂ ವಾಟರ್ ಸ್ಪೋರ್ಟ್ಸ್ನವರು ನೀರಿನಲ್ಲಿ ಮುಳುಗುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.