ಜೆಡಿಎಸ್‌ ತೊರೆದು ಬಿಜೆಪಿ ಸೇರುತ್ತೇನೆ: ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಘೋಷಣೆ!

ವಿಧಾನ ಪರಿಷತ್ ಸದಸ್ಯ, ಚಲನಚಿತ್ರ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ಜೆಡಿಎಸ್‌ ತೊರೆದು ಬಿಜೆಪಿ ಸೇರುತ್ತೇನೆ ಎಂದು ಹೇಳಿದ್ದಾರೆ. ಈಗಗಲೇ ಕೆಲವು ಶಾಸಕರು ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದು, ಪಕ್ಷ ತೊರೆಯಲು ಸಿದ್ದರಾಗಿದ್ದಾರೆ. ಈಗ ಇವರ ಪಟ್ಟಿಗೆ ಸಂದೇಶ್‌ ನಾಗರಾಜ್‌ ಸೇರಿಕೊಂಡಿದ್ದಾರೆ.

ಬಿಜೆಪಿ ಕಚೇರಿಗೆ ಭೇಟಿದ ಬಳಿಕ ಮಾತನಾಡಿದ ಅವರು, ಜನವರಿ 5 ರ ವರೆಗೆ ನಾನು ಜೆಡಿಎಸ್ ನಲ್ಲಿ ಇರುತ್ತೇನೆ. ಆ ನಂತರ ಪಕ್ಷ ತೊರೆದು ಬಿಜೆಪಿ ಸೇರುತ್ತೇನೆ ಎಂದು ಹೇಳಿದ್ದಾರೆ.

ಸಂದೇಶ್ ನಾಗರಾಜ್ ಅವರು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರ ವಿರುದ್ದ ಕೋಪಗೊಂಡಿದ್ದರು. ಹೀಗಾಗಿ ಕಳೆದ ಒಂದೂವರೆ ವರ್ಷದಿಂದ ಜೆಡಿಎಸ್ ನಿಂದ ದೂರ ಉಳಿದಿದ್ದರು ಎಂದು ಹೇಳಲಾಗಿದೆ.

ಅವರು ಬಿಜೆಪಿ ಸೇರಿದ ಬಳಿಕ ಚಾಮರಾಜನಗರ- ಮೈಸೂರು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ಸ್ಪರ್ಧಿಸುವುದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಾನಗಲ್‌ ಬೈ ಎಲೆಕ್ಷನ್‌: ಜೆಡಿಎಸ್‌ ಅಭ್ಯರ್ಥಿ ಘೋಷಣೆ; ನಿಯಾಜ್ ಶೇಕ್ ಕಣಕ್ಕೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights