ಭಬನಿಪುರದಲ್ಲಿ ಮತ ಎಣಿಕೆ ಆರಂಭ : ಪಶ್ಚಿಮ ಬಂಗಾಳ ಸಿಎಂ ಭವಿಷ್ಯ ಇಂದು ನಿರ್ಧಾರ!

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿದ ಭಬನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಇಂದು ಆರಂಭವಾಗಿದೆ.

ದಕ್ಷಿಣ ಕೋಲ್ಕತ್ತಾದ ಭಬನಿಪುರ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಪ್ರತಿಸ್ಪರ್ಧಿಯಾಗಿ ಬಿಜೆಪಿಯ ಪ್ರಿಯಾಂಕಾ ತಿಬ್ರೇವಾಲ್ ಸ್ಪರ್ಧೆಯಲ್ಲಿದ್ದು, ಎರಡೂ ಪಕ್ಷಗಳ ನಡುವೆ ಪೈಪೋಟಿನ ಕ್ಷೇತ್ರ ಇದಾಗಿದೆ. ಅಲ್ಲದೆ, ಸಿಪಿಐ(ಎಂ)ನಿಂದ ಶ್ರೀಜಿಬ್ ಬಿಸ್ವಾಸ್ ಸ್ಪರ್ಧಿಸಿದ್ದಾರೆ.

ಈ ಕ್ಷೇತ್ರವು ಎರಡು ಬಾರಿ ಮಮತಾ ಬ್ಯಾನರ್ಜಿ ಅವರನ್ನು ಆಯ್ಕೆ ಮಾಡಿತ್ತು ಆದಾಗ್ಯೂ, ಈ ಬಾರಿಯ ಮತದಾನವು ವಿಶೇಷ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ, ಏಕೆಂದರೆ ಮಮತಾ ಬ್ಯಾನರ್ಜಿ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಲೇ ಬೇಕಾಗಿದೆ.

ಇದೇ ವೇಳೆ ಮುರ್ಷಿದಾಬಾದ್ ಜಿಲ್ಲೆಯ ಸಂಶೇರ್‌ಗಂಜ್‌ ಮತ್ತು ಜಂಗಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮತದಾನವು ನಡೆದಿದೆ. ಆ ಕ್ಷೇತ್ರಗಳಲ್ಲಿ ಕ್ರಮವಾಗಿ ಶೇ 78.60 ಮತ್ತು ಶೇ 76.12ರಷ್ಟು ಮತದಾನವಾಗಿದೆ ಎಂದು ಆಯೋಗದ ಮೂಲಗಳು ತಿಳಿಸಿವೆ.

ಈ ಕ್ಷೇತ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು ಮಮತ ಬ್ಯಾನರ್ಜಿ ಅವರ ಸಿಎಂ ಭವಿಷ್ಯ ಇಂದು ನಿರ್ಧಾರವಾಗಿಲಿದೆ. ಮಮತಾ ಸಿಎಂ ಸ್ಥಾನವನ್ನು ಮುದುವರಿಸುತ್ತಾರಾ? ಇಲ್ವಾ? ಅನ್ನೋ ನಿರ್ಧಾರ ಇಂದಿನ ಫಲಿತಾಂಶದಿಂದ ತಿಳಿಯಲಿದೆ. ಹೀಗಾಗಿ ಎಲ್ಲರ ಚಿತ್ತ ಭಬನಿಪುರದತ್ತ ನಾಟಿದೆ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights