ಅಖಿಲೇಶ್ ಯಾದವ್ ಮನೆಯ ಹೊರಗೆ ಪೊಲೀಸ್ ವಾಹನಕ್ಕೆ ಬೆಂಕಿ…!
ಅಖಿಲೇಶ್ ಯಾದವ್ ಅವರ ಲಕ್ನೋ ಮನೆಯ ಹೊರಗೆ ಪ್ರತಿಭಟನಾಕಾರರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಸೋಮವಾರ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ನಿವಾಸದ ಹೊರಗೆ ಪ್ರತಿಭಟನಾಕಾರರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದರು. ಲಖಿಂಪುರ್ ಖೇರಿಯಲ್ಲಿ ಹಿಂಸಾಚಾರದ ಕುರಿತು ಅಖಿಲೇಶ್ ಯಾದವ್ ಅವರ ನಿವಾಸದ ಬಳಿ ಧರಣಿ ಕುಳಿತಿದ್ದಾಗ ಈ ಘಟನೆ ಸಂಭವಿಸಿದೆ.
ಭಾನುವಾರ ಉತ್ತರಪ್ರದೇಶದಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವರ ಮಗ ಕಾರು ಹತ್ತಿಸಿದ ಪರಿಣಾಮ ನಾಲ್ವರು ರೈತರು ಸಾವನ್ನಪ್ಪಿದ್ದಾರೆ. ಈ ಸಂದರ್ಭದಲ್ಲಿ ಭುಗಿಲೆದ್ದ ಹಿಂಸಾಚಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಮಾನವೀಯ ಕೃತ್ಯ ಖಂಡಿಸಿ ಇಂದು ದೇಶದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುವಂತೆ ರೈತ ಸಂಘಟನೆಗಳು ರೈತರಿಗೆ ಕರೆ ನೀಡಿವೆ.
ಇಂದು ಕಾಂಗ್ರೆಸ್ ನಾಯಕರು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರೊಂದಿಗೆ ಹಿಂಸಾಚಾರ ಪೀಡಿತ ಜಿಲ್ಲ್ಲೆಗೆ ಭೇಟಿ ನೀಡಲಿದ್ದಾರೆ.
ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ 10 ತಿಂಗಳಿನಿಂದ ದೆಹಲಿ ಗಡಿ ಭಾಗದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದರ ಭಾಗವಾಗಿ ನಿನ್ನೆ ನಡೆದ ಪ್ರತಿಭಟನೆಯಲ್ಲಿ ನಾಲ್ಕು ರೈತರು ಬಲಿಯಾಗಿದ್ದಾರೆ. ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಕೂಡ ಸೋಮವಾರ ಮುಂಜಾನೆ ಹಿಂಸಾಚಾರ ಪೀಡಿತ ಪ್ರದೇಶವನ್ನು ತಲುಪಿದರು. ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರು ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ದೇಶದಾದ್ಯಂತದ ರೈತ ಸಂಘಟನೆಗಳಿಗೆ ಇಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ದೇಶದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗಳಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಿದೆ.