ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವವರೆಗೂ ಆಂದೋಲನ ಕೈಬಿಡಲ್ಲ – ಟಿಕಾಯತ್
ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದು ಮತ್ತು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನು ಖಾತರಿ ಸೇರಿದಂತೆ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೂ ರೈತರ ಆಂದೋಲನ ಮುಂದುವರಿಯಲಿದೆ ಎಂದು ರೈತ ಮುಖಂಡ ರಾಕೇಶ್ ಟಿಕೈಟ್ ಹೇಳಿದ್ದಾರೆ.
ಭಾನುವಾರ ಸಂಜೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೇಂದ್ರ ಸರ್ಕಾರ 750 ರೈತರು ಸಾವನ್ನಪ್ಪಿದರೂ ಒಂದು ವರ್ಷದ ರೈತರ ಆಂದೋಲನವನ್ನು ಕಡೆಗಣಿಸುತ್ತಿದೆ” ಎಂದು ಹೇಳಿದರು.
ಕಳೆದ ವರ್ಷ ಸೆಪ್ಟೆಂಬರ್ ನಿಂದ ರೈತರು ಗಡಿ ಭಾಗದಲ್ಲಿ ರೈತ ವಿರೋಧಿ ಕಾನೂನುಗಳನ್ನು ರದ್ದು ಮಾಡುವಂತೆ ಆಗ್ರಹಿಸಿ ದೆಹಲಿ ಗಡಿ ಭಾಗದಲ್ಲಿ ನೆಲೆಯೂರಿದ್ದಾರೆ. ಆದರೂ ಈ ವರೆಗೆ ಸರಕುಗಳ ಬೆಲೆಯ ಹೊರತಾಗಿಯೂ ರೈತರ ಆದಾಯ ಹೆಚ್ಚಿಲ್ಲ ಎಂದು ಟಿಕೈಟ್ ಹೇಳಿಕೊಂಡಿದ್ದಾರೆ. ಮೂರು ಕೃಷಿ ಕಾನೂನುಗಳಲ್ಲಿ ಬಿಜೆಪಿ ರೈತ ವಿರೋಧಿಯಾಗಿದೆ. ಸಮಸ್ಯೆ ಬಗೆಹರಿಸಲು ಸಮ್ಮೊಂದಿಗೆ ಸಂವಾದಕ್ಕೆ ಸರ್ಕಾರ ಸಿದ್ಧವಿಲ್ಲ ಎಂದು ಅವರು ಹೇಳಿದರು.
ಕೇಂದ್ರದ ಬಿಜೆಪಿ ಸರ್ಕಾರ ಕೈಗಾರಿಕೋದ್ಯಮಿಗಳನ್ನು ಮಾತ್ರ ಬೆಂಬಲಿಸುತ್ತದೆ ಎಂದು ಅವರು ಆರೋಪಿಸಿದರು. ಹೀಗಾಗಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವವರೆಗೂ ಆಂದೋಲನ ಕೈಬಿಡಲ್ಲ ಎಂದು ರೈತ ನಾಯಕ ರಾಖೇಶ್ ಟಿಕಾಯತ್ ಹೇಳಿದ್ದಾರೆ.