ಬ್ರಿಟಿಷರ ಮುಂದೆ ಸಾವರ್ಕರ್ ಎಂದಿಗೂ ಕ್ಷಮೆ ಕೇಳಿಲ್ಲ: ಸಂಜಯ್ ರಾವತ್

ವೀರ ಸಾವರ್ಕರ್ ಅವರು ಎಂದಿಗೂ ಬ್ರಿಟಿಷರ ಕ್ಷಮೆ ಕೇಳಿಲ್ಲ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಹೇಳಿದ್ದಾರೆ. ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆಯುವಂತೆ ಸಾವರ್ಕರ್‌ಗೆ ಮಹಾತ್ಮ ಗಾಂಧಿಯವರು ಸೂಚಿಸಿದ್ದರು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದ ಒಂದು ದಿನದ ನಂತರ ಸಂಜಯ್‌ ರಾವತ್‌ ಈ ಹೇಳಿಕೆ ನೀಡಿದ್ಧಾರೆ.

ಹತ್ತು ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರರು ಜೈಲಿನಿಂದ ಹೊರಗೆ ಬಂದ ನಂತರ ಏನಾದರೂ ಮಾಡಬಹುದು ಎಂಬ ಬಗ್ಗೆ ಯೋಚಿಸಿ ಈ ರೀತಿಯ ತಂತ್ರವನ್ನು ಅಳವಡಿಸಿಕೊಳ್ಳಬಹುದು. ರಾಜಕೀಯದಲ್ಲಿ ಅಥವಾ ಜೈಲುವಾಸ ಅನುಭವಿಸುತ್ತಿರುವಾಗ, ವಿಭಿನ್ನ ತಂತ್ರವನ್ನು ಅಳವಡಿಸಿಕೊಳ್ಳಲಾಗುತ್ತದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.

“ಸಾವರ್ಕರ್ ಅವರು ಅಂತಹ ಯಾವುದೇ ತಂತ್ರವನ್ನು ಅಳವಡಿಸಿಕೊಂಡಿದ್ದರೆ ಅದನ್ನು ಕ್ಷಮೆ ಎಂದು ಕರೆಯಲಾಗುವುದಿಲ್ಲ. ಸಾವರ್ಕರ್ ಅದನ್ನು ಮಾಡಿರಬಹುದು (ತಂತ್ರ). ಇದನ್ನು ಕ್ಷಮೆ ಎಂದು ಕರೆಯಲಾಗುವುದಿಲ್ಲ. ಸಾವರ್ಕರ್ ಎಂದಿಗೂ ಬ್ರಿಟಿಷರಿಗೆ ಕ್ಷಮೆ ಕೇಳಲಿಲ್ಲ” ಎಂದು ಅವರು ಹೇಳಿದ್ದಾರೆ.

ಸಾವರ್ಕರ್ ಅವರಿಗೆ ಹಲವು ಸಂದರ್ಭಗಳಲ್ಲಿ ಭಾರತ ರತ್ನ ನೀಡುವಂತೆ ಆಗ್ರಹಿಸಿದ್ದ ರಾವುತ್, ಹಿಂದುತ್ವ ಪ್ರತಿಷ್ಠೆಯಾದ ಸ್ವಾತಂತ್ರ್ಯ ಹೋರಾಟಗಾರ ತಮ್ಮ ಪಕ್ಷಕ್ಕೆ ಯಾವಾಗಲೂ ಆದರ್ಶವಾಗಿದ್ದಾರೆ ಎಂದು ಹೇಳಿದ್ದಾರೆ.

“ಮಹಾತ್ಮ ಗಾಂಧಿಜಿ ಅವರು ಸಾವರ್ಕರ್‌ ಬಳಿಕ ಕ್ಷಮಾದಾನ ಅರ್ಜಿ ಸಲ್ಲಿಸಲು ಹೇಳಿದರು. ಸಾವರ್ಕರ್‌ ಜೀ ಅನ್ನು ಬಂಧನದಿಂದ ಮುಕ್ತಗೊಳಿಸಬೇಕು ಎಂದು ಮಹಾತ್ಮ ಗಾಂಧಿ ಮನವಿ ಮಾಡಿದ್ದರು. ಗುಲಾಮಗಿರಿಯ ಸಂಕೋಲೆಯನ್ನು ಮುರಿಯಲು ಜನರಿಗೆ ಸಾವರ್ಕರ್‌ ಪ್ರೇರಣೆ ನೀಡಿದರು. ಸಾವರ್ಕರ್‌ ಮಹಿಳಾ ಹಕ್ಕುಗಳು ಸೇರಿದಂತೆ ಇತರ ಸಾಮಾಜಿಕ ಸಮಸ್ಯೆಗಳ ನಡುವೆ ಅಸ್ಪೃಶ್ಯತೆಯ ವಿರುದ್ಧ ಆಂದೋಲನ ಮಾಡಿದರು. ಆದರೆ ಸಾವರ್ಕರ್‌ ಅವರು ದೇಶದ ಸಾಂಸ್ಕೃತಿಕ ಏಕತೆಗಾಗಿ ನೀಡಿದ ಕೊಡುಗೆಯನ್ನು ಕಡೆಗಣಿಸಲಾಗುತ್ತಿದೆ” ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಹೇಳಿದ್ದರು.

ಇದನ್ನೂ ಓದಿ: ಲಖಿಂಪುರ ರೀತಿಯ ಘಟನೆಗಳು ದೇಶದಲ್ಲಿ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights