ಭೀಕರ ಅಪಘಾತ: ಅಂಗಡಿ ಬಳಿ ಕುಳಿತಿದ್ದವರ ಮೇಲೆ ಲಾರಿ ಹರಿದು ಇಬ್ಬರ ದಾರುಣ ಸಾವು!
ಆಯುಧ ಪೂಜೆ ದಿನದಂದೇ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮದ್ದೂರು ತಾಲ್ಲೂಕಿನ ಮರಳಿಗ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಕೋಳಿ ಅಂಗಡಿ ಬಳಿ ಕುಳಿತಿದ್ದ ಇಬ್ಬರ ಮೇಲೆ ಹರಿದಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರನ್ನು ಕೀಳಘಟ್ಟ ಗ್ರಾಮದ ಗಿರೀಶ್ ಶೆಟ್ಟಿ ಮತ್ತು ಎನ್ ಕೋಡಿಹಳ್ಳಿ ಗ್ರಾಮದ ಲೋಕೇಶ ಎಂದು ಗುರುತಿಸಲಾಗಿದೆ.
ಕೋಳಿ ಅಂಗಡಿಯ ಮಾಲೀಕ ನಿಂಗೇಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬಿಜೆಪಿ ಶೀಘ್ರವೇ ‘ಸಾವರ್ಕರ್ರನ್ನು ರಾಷ್ಟ್ರಪಿತ’ ಎಂದು ಘೋಷಿಸುತ್ತದೆ: ಓವೈಸಿ