ಕಸರತ್ತು ವೇಳೆ ಕುಸಿದು ಬಿದ್ದ ನಟ ಪುನೀತ್‌ ರಾಜ್‌ಕುಮಾರ್; ಆಸ್ಪತ್ರೆಗೆ ದಾಖಲು

ಕನ್ನಡ ನಟ ಪುನೀತ್ ರಾಜ್‌ಕುಮಾರ್‌ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಬೆಳಗ್ಗೆ ಜಿಮ್‌ನಲ್ಲಿ ಕಸರತ್ತು ಮಾಡುವ ವೇಳೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ.

ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ನೀರಿಕ್ಷಿಸಲಾಗುತ್ತಿದ್ದು, ಚಿತ್ರರಂಗದ ಗಣ್ಯರು ಆಸ್ಪತ್ರೆಗೆ ಧಾವಿಸುತ್ತಿದ್ದಾರೆ. ನಟನ ಅನಾರೋಗ್ಯದ ಸುದ್ದಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ನಟ ಶಿವರಾಜ್‌ ಕುಮಾರ್, ರಾಕ್‌ ಲೈನ್ ವೆಂಕಟೇಶ್, ನಟರವಿಚಂದ್ರನ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಲಘು ಹೃದಯಾಘಾತ ಕಾಣಿಸಿಕೊಂಡಿದೆ ಎಂದು ಮೂಲಗಳು ಹೇಳುತ್ತಿದ್ದು, ಆಸ್ಪತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದಾರೆ.

ಮೊನ್ನೆ ತಾನೇ ಭಜರಂಗಿ – 2 ಚಿತ್ರದ ಪ್ರಮೋಷನ್ ಕಾರ್ಯಕ್ರಮದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ ಪುನೀತ್ ರಾಜ್ ಕುಮಾರ್ ಶಿವರಾಜ್ ಕುಮಾರ್ ಮತ್ತು ಯಶ್ ಜೊತೆಗೂಡಿ ಡ್ಯಾನ್ಸ್ ಮಾಡಿ ಅಭಿಮಾನಿಗಳಲ್ಲಿ ಹುರುಪು ಮೂಡಿಸಿದ್ದರು.

“ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು.
ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು.
ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು.
ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು.
ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ” ಎಂದು ಪುನೀತ್ ರಾಜ್ ಕುಮಾರ್ ನವೆಂಬರ್ 01 ರಂದು ಹೊಸ ಚಿತ್ರ ಘೋಷಿಸುವುದಾಗಿ ಫೇಸ್‌ಬುಕ್‌ನಲ್ಲಿ ತಿಳಿಸಿದ್ದರು. ಈಗ ಆಸ್ಪತ್ರೆ ಸೇರಿರುವುದು ಅವರ ಅಭಿಮಾನಿಗಳಲ್ಲಿ ಆತಂಕ ಹೆಚ್ಚಿಸಿದೆ.

ಇದನ್ನೂ ಓದಿ: ತಾಲಿಬಾನ್ ಕ್ರೌರ್ಯ: ಅಫ್ಘಾನ್ ವಾಲಿಬಾಲ್ ಆಟಗಾರ್ತಿ ಶಿರಚ್ಛೇದ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights