ಜೀವನ್ಮರಣ ಹೋರಾಟದಲ್ಲಿ ಪುನೀತ್ ರಾಜ್ಕುಮಾರ್; ಶಕ್ತಿ ಮೀರಿ ಚಿಕಿತ್ಸೆ ನೀಡುತ್ತಿದ್ದೇವೆ: ಡಾ. ರಂಗನಾಥ್
ಕನ್ನಡದ ಖ್ಯಾತ ನಟ ಪುನೀತ್ ರಾಜ್ಕುಮಾರ್ರವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು ಪರಿಸ್ಥಿತಿ ಗಂಭೀರವಾಗಿದೆ. ನಾವು ಶಕ್ತಿ ಮೀರಿ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ವಿಕ್ರಂ ಆಸ್ಪತ್ರೆಯ ಹೃದಯ ತಜ್ಞರಾದ ಡಾ.ರಂಗನಾಥ್ ತಿಳಿಸಿದ್ದಾರೆ.
ಒಮ್ಮೆ ಹೃದಯಾಘಾತ ಸಂಭವಿಸಿದ ನಂತರ ಆಸ್ಪತ್ರೆಗೆ ಕರೆತರುವಾಗ ಮತ್ತೊಮ್ಮೆ ಸಂಭವಿಸಿದೆ. ಆದರೂ ನಾವು ಹೃದಯಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಮುಂದುವರೆಸಿದ್ದೇವೆ ಎಂದು ಅವರು ಹೇಳಿದ್ದಾರೆ.
ಶುಕ್ರವಾರ ಬೆಳಗ್ಗೆ ಜಿಮ್ನಲ್ಲಿ ಕಸರತ್ತು ಮಾಡುವ ವೇಳೆ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ನಂತರ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಎಂ ಸೇರಿದಂತೆ ಹಲವು ಗಣ್ಯರು, ಚಿತ್ರನಟರು, ಅಭಿಮಾನಿಗಳು ಆಸ್ಪತ್ರೆಯ ಸುತ್ತ ನೆರೆದಿದ್ದಾರೆ.
ಮೊನ್ನೆ ತಾನೇ ಭಜರಂಗಿ – 2 ಚಿತ್ರದ ಪ್ರಮೋಷನ್ ಕಾರ್ಯಕ್ರಮದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ ಪುನೀತ್ ರಾಜ್ ಕುಮಾರ್ ಶಿವರಾಜ್ ಕುಮಾರ್ ಮತ್ತು ಯಶ್ ಜೊತೆಗೂಡಿ ಡ್ಯಾನ್ಸ್ ಮಾಡಿ ಅಭಿಮಾನಿಗಳಲ್ಲಿ ಹುರುಪು ಮೂಡಿಸಿದ್ದರು. ಈಗ ಪುನೀತ್ ಆಸ್ಪತ್ರೆ ಸೇರಿದ್ದರಿಂದ ಇಂದು ಬೆಳಿಗ್ಗೆಯಿಂದ ಬಿಡುಗಡೆಯಾಗಿದ್ದ ಶಿವರಾಜ್ ಕುಮಾರ್ ಅಭಿಯನದ ಭಜರಂಗಿ – 2 ಚಿತ್ರದ ಪ್ರದರ್ಶನವನ್ನು ರಾಜ್ಯಾದ್ಯಂತ ರದ್ದುಗೊಳಿಸಲಾಗಿದೆ.