ಸಿಎಂ ಬಲಿ ಪಡೆಯುತ್ತೆ ಬಿಟ್ ಕಾಯಿನ್ ಪ್ರಕರಣ; ಬಿಜೆಪಿಯಲ್ಲಿ ಈ ಬಾರಿಯೂ ಮೂವರು ಸಿಎಂ: ಪ್ರಿಯಾಂಕ್ ಖರ್ಗೆ
ಬಿಟ್ ಕಾಯಿನ್ ಪ್ರಕರಣವು ಬೊಮ್ಮಾಯಿ ಅವರ ಸಿಎಂ ಸ್ಥಾನವನ್ನು ಬಲಿ ಪಡೆಯುತ್ತದೆ. ಈ ಬಾರಿಯೂ ಬಿಜೆಪಿಯಲ್ಲಿ ಮೂವರು ಸಿಎಂ ಆಗಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಸದ್ಧು ಮಾಡುತ್ತಿರುವ ಬಿಟ್ ಕಾಯಿನ್ ದಂಧೆ ಪ್ರಕರಣ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಬಿಟ್ ಕಾಯಿನ್ ದಂಧೆಯಲ್ಲಿ ಬಿಜೆಪಿಗರು ಭಾಗಿಯಾಗಿದ್ದಾರೆ. ಈ ದಂಧೆಯಲ್ಲಿ ಬೇರೆ ಪಕ್ಷದವರೇನಾದರು ಭಾಗಿಯಾಗಿದ್ದರೆ ತನಿಖೆಯಾಗಲಿ. ತನಿಖೆಯಾದರೇ ಯಾರಿದ್ದಾರೆ ಎಂಬುದು ಬಹಿರಂಗವಾಗುತ್ತದೆ ಎಂದು ಖರ್ಗೆ ಹೇಳಿದ್ದಾರೆ.
ಬಿಜೆಪಿಗರು ಬರೀ ಬಾಯಿ ಮಾತಲ್ಲಿ ತನಿಖೆಗೆ ಆದೇಶಿಸಿದ್ದೇವೆ ಎಂದು ಹೇಳುತ್ತಿದ್ದಾರೆ. ಹ್ಯಾಕರ್ ಶ್ರೀಕಿಯಿಂದ ಜಪ್ತಿ ಮಾಡಿದ ಬಿಟ್ ಕಾಯಿನ್ ಎಲ್ಲಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ಈ ದಂದೆಯಲ್ಲಿ ಮುಖ್ಯಮಂತ್ರಿ ಭಾಗಿಯಾಗಿದ್ದಾರೆ ಎಂದು ಹೇಳುತ್ತಿಲ್ಲ. ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆದಿರುವ ಈ ದಂಧೆಯ ತನಿಖೆಯನ್ನ ಉನ್ನತ ಮಟ್ಟದ ತನಿಖೆಗೆ ವಹಿಸಬೇಕು. ಪಾರದರ್ಶಕ ತನಿಖೆಯಾದ್ರೆ ರಾಜ್ಯದಲ್ಲಿ ಬಿಜೆಪಿಯಿಂದ 3ನೇ ಮುಖ್ಯಮಂತ್ರಿ ನೋಡುತ್ತೇವೆ ಎಂದು ಅವರು ಹೇಳಿದ್ದಾರೆ.
Read also: ಬಿಜೆಪಿ ಪ್ರಚಾರಕ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ಶಿಕ್ಷಕರು ಭಾಗಿಯಾಗುವಂತೆ ಸುತ್ತೋಲೆ: ವ್ಯಾಪಕ ಖಂಡನೆ