ವಿಚ್ಛೇದನದ ಬಳಿಕ ನಾನು ಕುಸಿದು ಸಾಯುತ್ತೇನೆ ಎಂದು ಭಾವಿಸಿದ್ದೆ: ನಟಿ ಸಮಂತಾ

ಟಾಲಿವುಡ್ ನಟಿ ಸಮಂತಾ ರುತ್ ಪ್ರಭು ಅವರು ನಟ ನಾಗಚೈತನ್ಯ ಅವರಿಂದ ವಿಚ್ಛೇದನ ಪಡೆದಿರುವುದು ತಿಳಿದಿರು ವಿಚಾರ. ಈ ಕುರಿತಾಗಿ ಸಮಂತಾ ಮೊದಲ ಬಾರಿಗೆ ತಮ್ಮ ಮನಸ್ಸಿನ ಮಾತನ್ನು ಹಂಚಿಕೊಂಡಿದ್ದು, ನಾನು ನನ್ನನ್ನು ತುಂಬಾ ದುರ್ಬಲ ವ್ಯಕ್ತಿ ಎಂದು ಭಾವಿಸಿದ್ದೆ, ವಿಚ್ಛೇದನದ ಬಳಿಕ ಕುಗ್ಗಿಹೋಗಿ, ಸಾಯುವ ಹಂತ ತಲುಪುತ್ತೇನೆ ಎಂದುಕೊಂಡಿದ್ದೆ ಎಂದು ಹೇಳಿದ್ದಾರೆ.

ಫಿಲ್ಮ್ ಫೇರ್ ಸಂದರ್ಶನವೊಂದರಲ್ಲಿ ಮಾತನಾಡಿದ ಸಮಂತಾ, “ಜೀವನದಲ್ಲಿ ಕಷ್ಟದ ದಿನಗಳು ಬರುವುದು ಸಾಮಾನ್ಯ. ಅದನ್ನು ನಾವು ಧೈರ್ಯದಿಂದ ಎದುರಿಸಬೇಕು. ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿ ನಮಗೆ ಇರಬೇಕಾಗುತ್ತದೆ. ನಾನು ನನ್ನನ್ನು ತುಂಬಾ ದುರ್ಬಲ ವ್ಯಕ್ತಿ ಎಂದು ಭಾವಿಸಿದ್ದೆ, ವಿಚ್ಛೇದನದ ಬಳಿಕ ಕುಗ್ಗಿಹೋಗಿ, ಸಾಯುವ ಹಂತ ತಲುಪುತ್ತೇನೆ ಎಂದುಕೊಂಡಿದ್ದೆ. ಆದರೆ, ನನ್ನನ್ನು ನಾನು ಸಮರ್ಥವಾಗಿ ನಿಭಾಯಿಸಿಕೊಂಡಿದ್ದೇನೆ. ನನ್ನ ಮನಸ್ಥಿತಿ ಇಷ್ಟು ಬಲವಾಗಿದೆ ಎಂದು ನಾನು ಭಾವಿಸಿರಲಿಲ್ಲ” ಎಂದು ಹೇಳಿದ್ದಾರೆ.

ನನ್ನ ಬಗ್ಗೆ ನನಗೆ ಹೆಮ್ಮೆ ಇದೆ. ಇನ್ನು ಜೀವನದಲ್ಲಿ ಬಹಳ ಮುಂದೆ ಸಾಗಬೇಕಿದೆ ಎಂದು ಅವರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಸಮಂತಾ ಅವರು ತಮ್ಮ ಹೆಸರಿನ ಜೊತೆಗಿದ್ದ ಅಕ್ಕಿನೇನಿ ಎಂಬ ಪದವನ್ನು ತೆಗೆದು ಹಾಕಿದ್ದರು. ಈ ಬಳಿಕ ಹಲವು ವಿವಾದಗಳು ಸೃಷ್ಟಿಯಾಗಿದ್ದವು. ಸಮಂತಾ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಹರಿದಾಡುತ್ತಿತ್ತು.

ಈ ವದಂತಿಗಳು ಹರಿದಾಡುತಿದ್ದ ನಡುವೆಯೇ ಸಮಂತಾ ಅವರು ತಾಮ್ಮ ವಿಚ್ಛೇದನದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಘೋಷಿಸಿದ್ದರು. ನಂತರ ಸಮಂತಾ, ನಾಗಚೈತನ್ಯ ಇಬ್ಬರು ವಿಚ್ಛೇದನದ ಕುರಿತಾಗಿ ಯಾವುದೇ ಹೇಳಿಕೆ ನೀಡಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಸಮಂತಾ ಮಾತನಾಡಿದ್ದಾರೆ. ವಿಚ್ಛೇದದನದ ನಂತರ ಸಮಂತಾ ಹಲವು ಸಿನಿಮಾಗಳಲ್ಲಿ ನಟಿಸುವ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರೀತಿಯಷ್ಟೇ ಬಯಸಿದ್ದು; ಹಣವನ್ನಲ್ಲ; 200 ಕೋಟಿ ರೂ ಜೀವನಾಂಶ ನಿರಾಕರಿಸಿದ ನಟಿ ಸಮಂತಾ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights