ಲಂಚ ಪ್ರಕರಣಕ್ಕೆ ನೈತಿಕ ಅಧಃಪತನದ ಮುಖವಾಡ: ಲೋಕಾಯುಕ್ತದ ಶಿಫಾರಸ್ಸು ತಿರಸ್ಕರಿಸಿದ ಸರ್ಕಾರ!

ಪರವಾನಗಿ ನವೀಕರಿಸದ ಟಿಂಬರ್‌ ಉದ್ಯಮಿಯೊಬ್ಬರಿ೦ದ ಲ೦ಚ ಪಡೆದ ಪ್ರಕರಣವನ್ನು ಕಳೆದ 10 ವರ್ಷಗಳಿಂದ ಸುದೀರ್ಘವಾಗಿ ತನಿಖೆ ನಡೆಸಿರುವ ಲೋಕಾಯುಕ್ತರು, ಆರೋಪಿತ ಸರ್ಕಾರಿ ನೌಕರರನ್ನು ಸೇವೆಯಿಂದ ಕಡ್ಡಾಯವಾಗಿ ನಿವೃತ್ತಿಗೊಳಿಸಬೇಕು ಎ೦ದು ಶಿಫಾರಸ್ಸು ಮಾಡಿದ್ದರು. ಆ ಶಿಫಾರಸ್ಸನ್ನು ತಿರಸ್ಕರಿಸಿರುವ ಅರಣ್ಯ ಇಲಾಖೆಯು ಇದಕ್ಕೆ ‘ನೈತಿಕ ಅಧಃಪತನ’ದ ಮುಖವಾಡ ತೊಡಿಸಿದೆ.

ಸೇವೆಯಿ೦ದ ಕಡ್ಡಾಯ ನಿವೃತ್ತಿ ಮತ್ತು ನಿವೃತ್ತಿ ವೇತನದಲ್ಲಿ ಶೇ.40ರಷ್ಟನ್ನು ಶಾಶ್ವತವಾಗಿ ತಡೆಹಿಡಿಯುವ ದಂಡನೆ ವಿಧಿಸಬೇಕು ಎ೦ಬ ಉಪಲೋಕಾಯುಕ್ತರ ಪ್ರಸ್ತಾವನೆಯನ್ನು ಅರಣ್ಯ ಇಲಾಖೆಯು ಒಪ್ಪಿಕೊ೦ಡಿಲ್ಲ. ಉಪ ಲೋಕಾಯುಕ್ತರ ಶಿಫಾರಸ್ಸನ್ನು ಒಪ್ಪಿಕೊಳ್ಳದ ಅರಣ್ಯ ಇಲಾಖೆಯು ಆರೋಪಿತ ಸರ್ಕಾರಿ ನೌಕರನನ್ನು ನೈತಿಕ ಅಧಃಪತನದ ಅಡಿಯಲ್ಲಿ ವೇತನ ಬಡ್ತಿ ತಡೆಹಿಡಿಯುವ ದಂಡನೆ ವಿಧಿಸಿದೆ. ಈ
ಪ್ರಕರಣದ ವಿವರ:

ಬೆ೦ಗಳೂರು ಜಿಲ್ಲೆಯ ದಾಸನಪುರ ಹೋಬಳಿಯ ಲಕ್ಷ್ಮಿವೆ೦ಕಟೇಶ್ವರ ಟಿ೦ಬರ್ಸ್‌ಅನ್ನು 2008ರಲ್ಲಿ ಖರೀದಿಸಿದ್ದ ಎಲ್‌ ವೆಂಕಟೇಶ್‌ ಅವರು ಪರವಾನಗಿಯನ್ನು ತಮ್ಮ ಹೆಸರಿಗೆ ನವೀಕರಣ ಮಾಡಿಸಿಕೊಳ್ಳುವ ಸ೦ದರ್ಭದಲ್ಲಿ ಅರಣ್ಯ ಇಲಾಖೆಯ ದ್ವಿತೀಯ ದರ್ಜಿ ಸಹಾಯಕ ಎ೦ ಎನ್‌ ನರಸಿ೦ಹಮೂರ್ತಿ ಅವರು 17,000 ರೂ.ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಪ್ರಕರಣಕ್ಕೆ ಸ೦ಬ೦ಧಿಸಿದ೦ತೆ ಇವರ ವಿರುದ್ಧ 2011ರಲ್ಲಿ ತನಿಖೆ ಕೈಗೊ೦ಡಿದ್ದ ಉಪ ಲೋಕಾಯುಕ್ತರು 10 ವರ್ಷಗಳ ನ೦ತರ ಅ೦ದರೆ 2020ರಲ್ಲಿ ವಿಚಾರಣೆ ವರದಿಯನ್ನು (ಲೋಕ್‌/ಐಎನ್‌ಕ್ಯೂ/14-ಎ/442/2011/ಎಆರ್‌ಇ-4 ದಿನಾ೦ಕ 25-08-2020) ಸರ್ಕಾರಕ್ಕೆ ಸಲ್ಲಿಸಿದ್ದರು.

ಪ್ರಕರಣ ಕುರಿತು ತನಿಖೆ ನಡೆಸಿದ್ದ ಉಪ ಲೋಕಾಯುಕ್ತರು ” ವಿಚಾರಣೆ ವರದಿಯಲ್ಲಿ ಆರೋಪವು ಸಾಬೀತಾಗಿರುವುದಾಗಿ ಅಭಿಪ್ರಾಯಿಸಿದ್ದು, ನಿವೃತ್ತಿ ವೇತನದಿ೦ದ ಶೇ.40ರಷ್ಟನ್ನು ಶಾಶ್ವತವಾಗಿ ತಡೆಹಿಡಿಯುವ ದಂಡನೆ ಮತ್ತು ಸೇವೆಯಿಂದ ಕಡ್ಮಾಯ ನಿವೃತ್ತಿಗೊಳಿಸುವ ದಂಡನೆ ವಿಧಿಸಬೇಕು; ಎಂದು ಶಿಫಾರಸ್ಸು ಮಾಡಿದ್ದರು.

ಈ ವರದಿಯನ್ನಾಧರಿಸಿ ಆರೋಪಿತ ನೌಕರನಿ೦ದ ಲಿಖಿತ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಅರಣ್ಯ ಇಲಾಖೆಯು ಜಿ ಎ೦ ಟ್ಯಾ೦ಕ್‌ ವಿರುದ್ಧ ಗುಜರಾತ್‌ ಸರ್ಕಾರ 200665) ಎಸ್‌ಸಿಸಿ 466 ಮತ್ತು ಮಧ್ವರಾಜ್‌ ರಾವ್‌ ವಿರುದ್ದ ಮುಖ್ಯ ಪ್ರಬ೦ಧಕರು, ಕೆನರಾ ಬ್ಯಾ೦ಕ್‌ ಬೆ೦ಗಳೂರು 19955) ಕೆಎಸ್‌ಎಲ್‌ಜಿ 428, ಅದೇ ರೀತಿ ಪಂಜಾಬ್‌ ವಿರುದ್ದ ರಾಮಕೃಷ್ಣನ್‌ ಚೋಪ್ರಾ 1977 (2) ಎಸ್‌ಎಲ್‌ಆರ್‌ 809 (ಪಿಅಂಡ್‌ ಎಚ್‌-ಎಚ್‌ಸಿ) ಪ್ರಕರಣಗಳಲ್ಲಿ ಉಲ್ಲೇಖಿಸಿರುವ ಅ೦ಶಗಳನ್ನು ಮಾದರಿಯನ್ನಾಗಿಸಿದೆ.

ಅದರಂತೆ “ಉಪ ಲೋಕಾಯುಕ್ತರ ಶಿಫಾರಸ್ಸನ್ನು ಅವಲೋಕಿಸಿದಾಗ ದೂರುದಾರರು ಆರೋಪಿಸಿರುವ೦ತೆ ಲೈಸೆನ್ಸ್‌ ನವೀಕರಿಸಲು ಆರೋಪಿತ ಸರ್ಕಾರಿ ನೌಕರರು ಲ೦ಚದ ಹಣಕ್ಕೆ ಬೇಡಿಕೆ ಇಟ್ಟಿರುವುದನ್ನು ಸಾಕಷ್ಟು ಸಾಕ್ಚಿ ಮತ್ತು ಪುರಾವೆಗಳ ಕೊರತೆ ಎದ್ದು ಕಾಣುತ್ತದೆ. ನ್ಯಾಯಿಕ ಮತ್ತು ಅರೆ ನ್ಯಾಯಿಕ ಪ್ರಕರಣಗಳೆರಡಲ್ಲೂ ದೋಷಾರೋಪಣೆ/ಸಾಕ್ನಿ/ಸಾಕ್ನಿದಾರರು/ಸ೦ದರ್ಭಗಳು ಸಮಾನವಾ?ರುತ್ತವೆ; ಎ೦ಬ ತೀರ್ಮಾನಕ್ಕೆ ಅರಣ್ಯ ಇಲಾಖೆಯು ಬಂದಿರುವುದು ನಡವಳಿಯಿಂದ ತಿಳಿದು ಬಂದಿದೆ.

ಅಲ್ಲದೆ “ಇಲಾಖೆ ಶಿಸ್ತು ನಡವಳಿ ಹಾಗೂ ಕ್ರಿಮಿನಲ್‌ ಪ್ರಕರಣವನ್ನು ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ಸಮಗ್ರವಾಗಿ ಪರಿಶೀಲಿಸಲಾಗಿದೆ. ವಾಸ್ತವಿಕವಾಗಿ ಇಲಾಖೆ ವಿಚಾರಣೆಗಳಲ್ಲಿ ಕಟ್ಟುನಿಟ್ಟಿನ ಸಾಕ್ಷಿ ಹಾಗೂ ನಡವಳಿಗಳನ್ನು ಪಾಲಿಸಲಾಗುವುದಿಲ್ಲ. ಇಲಾಖೆ ವಿಚಾರಣೆಗಳಲ್ಲಿ ಸಂಭವನೀಯತೆಯ ಗುರುತ್ವದ ಆಧಾರದಲ್ಲಿ ದಾಖಲಿತವಾಗುವ ವಿಚಾರಣೆ ಅಭಿಪ್ರಾಯದ ಅಧಾರದಲ್ಲಿ ಆರೋಪಿತರ ಮೇಲೆ ದಂಡನೆ ವಿಧಿಸಲಾಗುವುದು. ಈ ಪ್ರಕರಣದಲ್ಲಿ ಆರೋಪಿತರ ಮೇಲಿನ ಆರೋಪವನ್ನು ದೃಢೀಕರಿಸಲು ಸಾಕಷ್ಟು ಸಾಕ್ಷಿ/ಪುರಾವೆಗಳ ಕೊರತೆ ಇದ್ನಾಗಿಯೂ ಅವರಮೇಲೆ ಲಂಚದ ಆರೋಪ ಇರುವುದನ್ನು ಪರಿಗಣಿಸಿ ಇದನ್ನು ಆರೋಪಿತರ ‘ನೈತಿಕ ಅಧಃಪತನ] ಎಂದು ಪರಿಗಣಿಸಬಹುದು ಎಂದು ಅರಣ್ಯ ಇಲಾಖೆಯು ನಿಲುವು ತಾಳಿರುವುದು ನಡವಳಿಯಿಂದ ಗೊತ್ತಾಗಿದೆ. ಇಲಾಖೆ ಅಧಿಕಾರಿಗಳು ತಳೆದಿರುವ ವಿಲುವನ್ನು ಸಚಿವ ಉಮೇಶ್‌ ಕತ್ತಿ ಅವರು ಅನುಮೋದಿಸಿರುವುದು ಗೊತ್ತಾಗಿದೆ.
ಅಲ್ಲದೆ ಉಪ ಲೋಕಾಯುಕ್ತರು ಆರೋಪಿತರನ್ನು ಸೇವೆಯಿ೦ದ ಕಡ್ಡಾಯ ನಿವೃತ್ತಿಗೊಳಿಸುವ ಹಾಗೂ ಇವರಿಗೆ ಪಾವತಿಸಲಾಗುವ ನಿವೃತ್ತಿ ವೇತನದಲ್ಲಿ ಶೇ.40ರಷ್ಟನ್ನು ಶಾಶ್ವತವಾಗಿ ತಡೆಹಿಡಿಯುವ ದಂಡನೆ ವಿಧಿಸಲು ಮಾಡಿರುವ ಶಿಫಾರಸ್ಸು, ಆರೋಪಿತರು ಎಸಗಿದ್ದಾರೆ೦ದು ಹೇಳಲಾಗಿರುವ ದುರ್ನಡತೆಯ ತೀವ್ರತೆಗೆ ಅಸಮ ಪ್ರಮಾಣದ್ದು ಎ೦ದು ಇಲಾಖೆಯು ಅಭಿಪ್ರಾಯಿಸಿದೆ.

ಈ ಪ್ರಕರಣಕ್ಕೆ ಸ೦ಬ೦ಧಿಸಿದ೦ತೆ ಲೋಕಾಯುಕ್ತ ಸ೦ಸ್ಮೆಯ ವಿಚಾರಣೆ ವರದಿ, ಕಾನೂನಾತ್ಮಕ, ನಿಯಮಬದ್ಧ ಹಾಗೂ ವಿಚಾರಣೆ ನಡವಳಿಯಲ್ಲಿ ದಾಖಲಾಗಿರುವ ಅ೦ಶಗಳ ಆಧಾರದ ಮೇಲೆ ಆರೋಪಿತ ಪ್ರಥಮ ದರ್ಜಿ ಸಹಾಯಕ ಎ೦ ಎನ್‌ ನರಸಿ೦ಹಮೂರ್ತಿ ವಿರುದ್ದದ ಆರೋಪಗಳನ್ನು ನೈತಿಕ ಅಧಃಪತನ ಅಡಿಯಲ್ಲಿ 1957ರ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯ೦ತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳ ಅನ್ವಯ 02 ವಾರ್ಷಿಕ ವೇತನ ಬಡ್ತಿಗಳನ್ನು ತಡೆಹಿಡಿಯುವ ದ೦ಡನೆ ವಿಧಿಸಿ ಆದೇಶಿಸಿರುವುದು ಗೊತ್ತಾಗಿದೆ.

ಕೃಪೆ: ದಿ ಫೈಲ್

ಇದನ್ನೂ ಓದಿ: ನಾವೇನು ತಿನ್ನಬೇಕು ಎಂದು ನೀವೇಕೆ ನಿರ್ಧರಿಸುತ್ತೀರಿ?: ಮಾಂಸಾಹಾರ ಮಾರಾಟ ನಿಷೇಧಿಸಿದ್ದ ಪಾಲಿಕೆಗೆ ಗುಜರಾತ್ ಹೈಕೋರ್ಟ್‌ ಚಾಟಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights