ಹೊಸಪೇಟೆ: ಬಿಜೆಪಿ ಅಭ್ಯರ್ಥಿಗೆ ಬಿ ಫಾರಂ ಕೊಟ್ಟು ಕಾಂಗ್ರೆಸ್‌ ಯಡವಟ್ಟು!

ವಿಜಯ ನಗರ ಜಿಲ್ಲೆಯ ಹೊಸಪೇಟೆ ನಗರಸಭೆಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗೆ ಬಿ ಫಾರಂ ನೀಡಿ ಎಡವಟ್ಟು ಮಾಡಿಕೊಂಡಿದೆ. ಹೀಗಾಗಿ, ಇದೀಗ ತಾವು ಬಿ ಫಾರಂ ನೀಡಿರುವ ಅಭ್ಯರ್ಥಿಗೆ ಮತ ನೀಡಬೇಡಿ ಎಂದು ಕಾಂಗ್ರೆಸ್‌ ಪ್ರಚಾರ ಮಾಡುತ್ತಿದೆ.

ಹೊಸಪೇಟೆಯ 16ನೇ ವಾರ್ಡಿನ ಬಿಜೆಪಿ ಅಭ್ಯರ್ಥಿ ಮುಮ್ತಾಜ್​ ಅವರಿಗೆ ಕಾಂಗ್ರೆಸ್ ಬಿ ಫಾರಂ ನೀಡಿದೆ. ಇದು ತಿಳಿದು ಬಂದ ಬಳಿಕ ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್‌, ನಾವು ತಪ್ಪಾಗಿ ಬಿಜೆಪಿ ಅಭ್ಯರ್ಥಿಗೆ ಬಿ ಫಾರಂ ಕೊಟ್ಟಿದ್ದೇವೆ. ಅವರಿಗೆ ಮತ ನೀಡಬೇಡಿ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿರುವ ಗಿರಿಜಾ ಸೋಮಶೇಖರ್ ಅವರಿಗೆ ಮತ ಚಲಾಯಿಸಿ ಎಂದು ಬಳ್ಳಾರಿ ಜಿಲ್ಲಾ ಕಾಂಗ್ರೆಸ್‌ ಮನವಿ ಮಾಡಿದೆ.

ಕೆಪಿಸಿಸಿಯಿಂದ ನಮಗೆ ಆದೇಶ ಬಂದಿದೆ. ಕಾಂಗ್ರೆಸ್ ಪಕ್ಷದ ಬಿ ಫಾರಂ ನೀಡಿದ ಅಭ್ಯರ್ಥಿ ಪರ ಮತಯಾಚನೆಗೆ ನಾವು ಬರುವುದಿಲ್ಲ. ಅವರು ಬಿಜೆಪಿ ಅಭ್ಯರ್ಥಿ ಎಂದು ತಿಳಿದು ಬಂದಿದೆ. ಆ ಕಾರಣದಿಂದಾಗಿ, ಗಿರಿಜಾ ಸೋಮಶೇಖರ್ ಅವರನ್ನು ಕಾಂಗ್ರೆಸ್‌ ಬೆಂಬಲಿಸುತ್ತಿದೆ. ಕಾಂಗ್ರೆಸ್‌ಗೆ ಮತ ಚಲಾಯಿಸುವ ಮತದಾರರು ಗಿರಿಜಾ ಅವರಿಗೆ ಮತ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್​ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ: ಗೋವಾ: ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಅಲೆಕ್ಸೊ ರೆಜಿನಾಲ್ಡೊ ಟಿಎಂಸಿಗೆ ಸೇರ್ಪಡೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights