ಬೆಂಗಳೂರು: ಬೀದಿಬದಿ ವ್ಯಾಪಾರಿಗಳು ತಯಾರಿದ್ದ ಆಹಾರ ಚೆಲ್ಲಿ ಅಧಿಕಾರಿಗಳ ದರ್ಪ; ವ್ಯಾಪಕ ಖಂಡನೆ

ಬೀದಿಬದಿ ವ್ಯಾಪಾರಿಗಳು ತಯಾರಿಸಿದ ಆಹಾರವನ್ನು ಚೆಲ್ಲಿ ಅಧಿಕಾರಿಗಳು ದರ್ಪ ಮೆರೆದಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂ ಬಳಿ ನಡೆದಿದೆ.

ಕೆ.ಆರ್.ಪುರಂನಲ್ಲಿರುವ ಮಣಿಪಾಲ್ ಆಸ್ಪತ್ರೆಯಿಂದ ಐಟಿಪಿಎಲ್ ವರೆಗೆನ ಪಾದಚಾರಿ ಮಾರ್ಗದಲ್ಲಿ ಹಲವು ವರ್ಷಗಳಿಂದ ಕೆಲ ಸಣ್ಣ ಪುಟ್ಟ ವ್ಯಾಪಾರಿಗಳು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ.

ಆದರೆ ಇಂದು ಏಕಾಏಕಿ ಬಿಬಿಎಂಪಿ ಅಧಿಕಾರಿಗಳು ಮಹದೇವಪುರ ಪೊಲೀಸ್ ಠಾಣೆಯ ಅಧಿಕಾರಿಗಳ ನೇತೃತ್ವದಲ್ಲಿ ಎಇಇ ಕುಬೇರಪ್ಪ ದಾಳಿ ನಡೆಸಿ, ವ್ಯಾಪಾರಿಗಳು ತಯಾರಿಸಿದ ಆಹಾರ ಪದಾರ್ಥಗಳನ್ನು ಬಿಸಾಡುವ ಮೂಲಕ ತಮ್ಮ ದರ್ಪ ತೋರಿದ್ದಾರೆ. ಈ ಹಿನ್ನೆಲೆ, ವ್ಯಾಪಾರಿ ಕಲಾವತಿ ಎಂಬ ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದು, ಹಲವು ವರ್ಷಗಳಿಂದ ಇಲ್ಲಿ ವ್ಯಾಪಾರ ಮಾಡಿಕೊಂಡು ಜೀವನ ನಡೆ ಸುತ್ತಿದ್ದು,

ಯಾವುದೇ ನೋಟಿಸ್ ನೀಡದೆ, ಬೆಳಿಗ್ಗೆ ೧೦ ಗಂಟೆಗೆ ಅಧಿಕಾರಿಗಳು ಏಕಾಏಕಿ ತೆರವು ಮಾಡಿದರೆ ಎಲ್ಲಿಗೆ ಹೋಗೋದು, ತಯಾರಿಸಿದ ಆಹಾರವನ್ನು ಮಾರಾಟ ಮಾಡುವುದಕ್ಕೂ ಬಿಡುತ್ತಿಲ್ಲ. ನಾವು ಇದನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದು, ನಮಗೆ ಇದು ಬಿಟ್ಟರೇ ಬೇರೆ ಕೆಲಸವಿಲ್ಲ. ಇಲ್ಲವಾದರೆ ಯಾವುದಾದರೂ ಸರ್ಕಾರಿ ಕೆಲಸ ಕೊಡಿಸಿ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights