Fact check: ಶಾರುಖ್ ಖಾನ್ ಲತಾ ಮಂಗೇಶ್ಕರ್ ಅವರ ಮೃತ ದೇಹಕ್ಕೆ ಉಗುಳಿಲ್ಲ
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಅಂತಿಮ ದರ್ಶನಕ್ಕೆ ಮ್ಯಾನೇಜರ್ ಪೂಜಾ ದದ್ಲಾನಿ ಜೊತೆ ಶಿವಾಜಿ ಪಾರ್ಕ್ ಗೆ ಬಂದ ಶಾರುಖ್ ಖಾನ್ ದುವಾ ಮಾಡಿದ್ದರು(ಇಸ್ಲಾಂ ಧರ್ಮದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸುವ ರೀತಿ), ಅವರ ಮ್ಯಾನೇಜರ್ ಪೂಜಾ ದದ್ಲಾನಿ ಹಿಂದೂ ಸಂಪ್ರದಾಯದ ಪ್ರಕಾರ ಕೈಮುಗಿದಿದ್ದರು. ಇದು ಟ್ವಿಟ್ಟರ್, ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ದುವಾ ನೆರೆವೇರಿಸಿದ ಬಳಿಕ ಶಾರೂಕ್ ಖಾನ್ ಮಾಸ್ಕ್ ತೆಗೆದು ಮೃತದೇಹದ ಮೇಲೆ ಉಗುಳಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆರೋಪಿಸಲಾಗಿದೆ.
BJPಯ ಕೆಲ ನಾಯಕರು ಶಾರೂಖ್ ಖಾನ್ ಅವರನ್ನು ಟೀಕಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ, ಬಾಲಿವುಡ್ ಖಾನ್ ಗಳ ದರಿದ್ರ ಮನಸ್ಥಿತಿಯೇ ಹೀಗೆ, ತಮ್ಮ ಅಸಹಜ ನಡವಳಿಕೆಯಿಂದ ದೇಶದ ಗಮನ ತಮ್ಮತ್ತ ಸೆಳೆಯುವುದು, ಪ್ರಚಾರದ ತೆವಲು. ಸಂಪ್ರದಾಯದ ಹೆಸರಿನಲ್ಲಿ ಅನಿಷ್ಟಗಳನ್ನು ಮಾಡುವುದು, ರಾಷ್ಟ್ರಧ್ವಜವನ್ನು ಹೊದಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ಶವದ ಮೇಲೆ ಉಗುಳುವುದು, ಅವರ ಹೀನ ಮನಸ್ಥಿತಿಯನ್ನು ತೋರಿಸುತ್ತದೆ ಎಂದಿದ್ದಾರೆ. ಹಾಗಿದ್ದರೆ ಶಾರುಖ್ ಖಾನ್ ತಮ್ಮ ಮಾಸ್ಕ್ ತೆಗೆದು ಉಗುಳಿದ್ದಾರೆಯೇ ? ಘಟನೆಯ ವಾಸ್ತವವೇನೆಂದು ಫ್ಯಾಕ್ಟ್ಚೆಕ್ ಮೂಲಕ ಪರಿಶೀಲಿಸೋಣ.
ಫ್ಯಾಕ್ಟ್ಚೆಕ್:
ವಾಸ್ತವವಾಗಿ ಶಾರುಖ್ ಖಾನ್ ತಮ್ಮ ಮಾಸ್ಕ್ ತೆಗೆದು ಉಗುಳಿಲ್ಲ, ಬದಲಿಗೆ ಇಸ್ಲಾಂ ಧರ್ಮದ ಪದ್ಧತಿಯಂತೆ, ದುಷ್ಟ ಶಕ್ತಿಗಳು ಅಥವಾ ‘ಸೈತಾನ’ನನ್ನು ದೂರವಿಡಲು ಹೀಗೆ ಗಾಳಿಯಲ್ಲಿ ಊದಲಾಗುತ್ತದೆ ಇದು ಇಸ್ಲಾಂನಲ್ಲಿರುವ ಧಾರ್ಮಿಕ ಪದ್ದತಿ.
https://twitter.com/krishna_Ind1an/status/1490401490783068160?ref_src=twsrc%5Etfw%7Ctwcamp%5Etweetembed%7Ctwterm%5E1490401490783068160%7Ctwgr%5E%7Ctwcon%5Es1_&ref_url=https%3A%2F%2Fwww.timesnownews.com%2Fentertainment-news%2Farticle%2Ffact-check-did-shah-rukh-khan-spit-on-lata-mangeshkars-mortal-remains-heres-the-truth%2F856475
ಮತ್ತೊಬ್ಬರು ಟ್ವೀಟ್ ಮಾಡಿ, ಶಾರುಕ್ ಖಾನ್ ಉಗುಳಲಿಲ್ಲ, ಅವರು ತಮ್ಮ ಧರ್ಮದ ಪ್ರಕಾರ ಲತಾ ಮಂಗೇಶ್ಕರ್ ಅವರಿಗೆ ಯಾವುದೇ ಕೆಟ್ಟದ್ದು ಆಗದಿರಲಿ ಎಂದು ಆ ರೀತಿ ಗಾಳಿಯಲ್ಲಿ ಊದಿದ್ದಾರೆ. ಜನರು ಇದನ್ನು ಒಳ್ಳೆಯ ರೀತಿಯಿಂದ ತೆಗೆದುಕೊಳ್ಳಬೇಕು ಎಂದಿದ್ದಾರೆ.
SRK didn't spit there. He blew, which is a common practice in Islam. Muslims do blow air from their mouth after reciting Ayats from Holy Quran.
RWs are making issue out of nothing that too in the death of an eminent personality. #LataMangeshkar#ShivajiPark#ShahRukhKhan
— Rio the Gökbörü (@RedRanger3000) February 6, 2022
ಮತ್ತೊಬ್ಬರು, ಶಾರುಕ್ ಖಾನ್ ಲತಾ ದೀದಿ ಮೃತದೇಹದ ಮುಂದೆ ದುವಾ ಓದಿ ಮುಂದಿನ ಜೀವನದಲ್ಲಿ ರಕ್ಷಣೆ ಸಿಗಲಿ ಎಂದು ಕಳೇಬರದ ಎದುರು ಊದಿದ್ದಾರೆ. ಇದರಲ್ಲಿ ಯಾವುದೇ ಅಪಾರ್ಥ, ಕೆಟ್ಟ ನಡತೆಯಿಲ್ಲ ಎಂದಿದ್ದಾರೆ.
ಇದೆಲ್ಲವನ್ನು ಒಟ್ಟಾರೆಯಾಗಿ ಗಮನಿಸಿದರೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಮತ್ತು ಬಿಜೆಪಿ ನಾಯಕರು ಟೀಕಿಸುತ್ತಿರುವಂತೆ ಶಾರುಖ್ ಖಾನ್ ತಮ್ಮ ಇಸ್ಲಾಮಿಕ್ ಧಾರ್ಮಿಕ ನಂಬಿಕೆಯಂತೆ ಗಾಳಿಯಲ್ಲಿ ಊದಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಸಾಮಾಜಿಕ ಮಾದ್ಯಮಗಳಲ್ಲಿ ವೈರಲ್ ಆಗುತ್ತಿರುವಂತೆ ಶಾರುಖ್ ಖಾನ್ ಲತಾ ಮಂಗೇಶ್ಕರ್ ಅವರ ಅಂತಿಮ ನಮನದ ವೇಳೆ ಉಗುಳಿಲ್ಲ.
ಇದನ್ನೂ ಓದಿ: Fact check: ಲತಾ ಮಂಗೇಶ್ಕರ್ ಅಂತಿಮ ನಮನದ ವೇಳೆ ಶಾರುಖ್ ಜೊತೆಗಿರುವುದು ಗೌರಿ ಖಾನ್ ಅಲ್ಲ