ಫ್ಯಾಕ್ಟ್ಚೆಕ್: ಧ್ವಜಕ್ಕೆ ಬೆಂಕಿ ಹಚ್ಚಿದ್ದು RSS ಕಾರ್ಯಕರ್ತನಲ್ಲ
75 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲು ಸರ್ಕಾರವು ‘ಆಜಾದಿ ಕಾ ಅಮೃತ್ ಮಹೋತ್ಸವ’ ಎಂಬ ಕಾರ್ಯಕ್ರಮವನ್ನು ಮಾಡುತ್ತಿದೆ. ರಾಷ್ಟ್ರವನ್ನು ಉದ್ದೇಶಿಸಿ ‘ಮನ್ ಕಿ ಬಾತ್’ ಪ್ರಧಾನಿ ನರೇಂದ್ರ ಮೋದಿ ಭಾನುವಾರ ‘ಹರ್ ಘರ್ ತಿರಂಗ’ ಆಚರಣೆಯ ಭಾಗವಾಗಿ ಆಗಸ್ಟ್ ತಿಂಗಳಲ್ಲಿ 13-15 ರವರೆಗೆ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವಂತೆ ಭಾರತೀಯರಿಗೆ ಕರೆ ನೀಡಿದ್ದರು. ಆದರೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕಾರ್ಯಕರ್ತರೊಬ್ಬರು ಇದನ್ನು ವಿರೋಧಿಸಿ ಧ್ವಜವನ್ನು ಸುಟ್ಟುಹಾಕಿದ್ದಾರೆ ಎಂದು ಪ್ರತಿಪಾದಿಸಿ ಪೋಸ್ಟ್ಅನ್ನು ಹಂಚಿಕೊಂಡಿದ್ದಾರೆ. ಪೋಸ್ಟ್ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ಫೋಟೋದಲ್ಲಿರುವ ವ್ಯಕ್ತಿ ಎಂ ಪ್ರಭು ಅವರು ತಮಿಳು ರಾಷ್ಟ್ರೀಯವಾದಿ ಸಂಘಟನೆ “ತಮಿಳ್ ದೇಸಿಯ ಪೆರಿಯಕ್ಕಂ”ಗೆ ಸೇರಿದವರು ಎಂದು BOOM ಕಂಡುಹಿಡಿದಿದೆ. ಕೇಂದ್ರ ಸರ್ಕಾರದ ವಿರುದ್ಧ 2018ರ ಏಪ್ರಿಲ್ನಲ್ಲಿ ಪ್ರತಿಭಟನೆ ನಡೆಸಿದ್ದ ಪಕ್ಷವು ಕಾವೇರಿ ನದಿ ನೀರು ವಿವಾದ ಕುರಿತು ಮಂಡಳಿ ರಚಿಸುವಂತೆ ಒತ್ತಾಯಿಸಿತ್ತು ಪ್ರತಿಭಟಿಸಿತ್ತು. ಆಗ ಅವರು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
Meet Mr M Prabhu, a arts teacher at a school in Tamil Nadu. He protests against the government by burning the Indian flag.
Hate any government, but never hate the nation that gives you an identity! You might be a Tamil,Telugu,Marathi etc but you're an Indian first! pic.twitter.com/zOVhXWWYls— Girish Bharadwaj (@Girishvhp) April 4, 2018
ತಂಜಾವೂರು ಜಿಲ್ಲೆಯ ಕುಂಭಕೋಣಂ ಬಳಿಯ ಪುತ್ತುಪುದೈಯೂರ್ನ ಮಠ ಚರ್ಚ್ ಸ್ಟ್ರೀಟ್ನ ನಿವಾಸಿ ಎಂ ಪ್ರಭು ಅವರು ಪೋಸ್ಟ್ ಮಾಡಿದ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸರು ಅವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಏಪ್ರಿಲ್ 2, 2018 ರ ಟೈಮ್ಸ್ ಆಫ್ ಇಂಡಿಯಾ ವರದಿ ನೋಡಬಹುದು.
ಕಾವೇರಿ ಜಲವಿವಾದವನ್ನು ಪ್ರತಿಭಟಿಸಿ ತಮಿಳು ಶಾಲೆಯ ಶಿಕ್ಷಕನೊಬ್ಬ ತ್ರಿವರ್ಣ ಧ್ವಜವನ್ನು ಸುಟ್ಟುಹಾಕುತ್ತಿರುವ ಹಳೆಯ ಚಿತ್ರವು ಮತ್ತೆ ಕಾಣಿಸಿಕೊಂಡಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕಾರ್ಯಕರ್ತರೊಬ್ಬರು ಧ್ವಜವನ್ನು ಸುಟ್ಟುಹಾಕಿದ್ದಾರೆ ಎಂಬ ಸುಳ್ಳು ಹೇಳಿಕೆಗಳೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ವರದಿಯ ಪ್ರಕಾರ, ಎಂ ಪ್ರಭು ಎಂದು ಗುರುತಿಸಲಾದ ವ್ಯಕ್ತಿ ತಮಿಳು ರಾಷ್ಟ್ರೀಯವಾದಿ ಸಂಘಟನೆ “ತಮಿಳು ದೇಸಿಯ ಪೆರಿಯಕ್ಕಂ” ನೊಂದಿಗೆ ಸಂಬಂಧ ಹೊಂದಿದ್ದಾನೆ. ಸುಪ್ರೀಂ ಕೋರ್ಟ್ ಆದೇಶದ ನಂತರವೂ ಕಾವೇರಿ ನಿರ್ವಹಣಾ ಮಂಡಳಿ (ಸಿಎಮ್ಬಿ) ರಚನೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಿರಾಕರಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು.
ಒಟ್ಟಾರೆಯಾಗಿ ಹೇಳುವುದಾದರೆ, ಕಾವೇರಿ ಜಲವಿವಾದವನ್ನು ಪ್ರತಿಭಟಿಸಿ ತ್ರಿವರ್ಣ ಧ್ವಜ ಸುಡುತ್ತಿರುವ ತಮಿಳು ಶಾಲೆಯ ಶಿಕ್ಷಕ ಎಂ ಪ್ರಭು ಅವರು RSS ನ ಯಾವುದೇ ಅಂಗಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿದ್ದಾರೆಯೇ ಎಂದು ಪರಿಶೀಲಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಪೋಸ್ಟ್ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : ಫ್ಯಾಕ್ಟ್ಚೆಕ್: ಸರ್ಕಾರಿ ಶಾಲೆಯಲ್ಲಿ ನಕಲಿ ಶಿಕ್ಷಕ – ವೈರಲ್ ವಿಡಿಯೋದ ವಾಸ್ತವವೇನು?