ಫ್ಯಾಕ್ಟ್ಚೆಕ್: ರಾಮ ಮಂದಿರ ನಿರ್ಮಾಣಕ್ಕೆ ನಟ ಯಶ್ 50 ಕೋಟಿ ದೇಣಿಗೆ ನೀಡಿದ್ದಾರೆ ಎಂಬುದು ನಿಜವೇ?
ಕನ್ನಡ ಚಿತ್ರರಂಗದ ರಾಕಿಂಗ್ ಸ್ಟಾರ್ ನಟ ಯಶ್ KGF 2 ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ, ಅವರ ಮುಂದಿನ ಸಿನಿಮಾ ಯಾವುದು ಎಂದು ಅವರ ಅಭಿಮಾನಿಗಳು ಕಾಯುತ್ತಿದ್ದಾರೆ. ಇದೆಲ್ಲದರ ನಡುವೆ ಸಾಮಾಜಿಕ ಮಾಧ್ಯಮದಲ್ಲಿ ಯಶ್ ಅವರ ಬಗ್ಗೆ ಸುದ್ದಿಯೊಂದು ವೈರಲ್ ಆಗಿದ್ದು, “ನಟ ಯಶ್ ಅವರು ಅಯೋಧ್ಯೆಗೆ ಭೇಟಿ ನೀಡಿದ್ದು, ರಾಮಮಂದಿರ ನಿರ್ಮಾಣಕ್ಕೆ 50 ಕೋಟಿ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ” ಎಂಬ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಸುದ್ದಿ ನಿಜವೇ ಎಂದು ಪೋಸ್ಟ್ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಇಂಡಿಯನ್ ಎಕ್ಸ್ಪ್ರೆಸ್ ಪ್ರಕಟಿಸಿದ ಸುದ್ದಿ ಲಭ್ಯವಾಗಿದ್ದು. ‘ಕೆಜಿಎಫ್ 2 ಬಿಡುಗಡೆಗೂ ಮುನ್ನ ತಿರುಪತಿಗೆ ಭೇಟಿ ನೀಡಿದ ಯಶ್’ ಎಂಬ ವರದಿಯನ್ನು 12 ಏಪ್ರಿಲ್ 2022 ರಂದು ಪ್ರಕಟಿಸಲಾಗಿದೆ. ಈ ಲೇಖನದಲ್ಲಿನ ಒಂದು ಫೋಟೋ ವೈರಲ್ ಪೋಸ್ಟ್ನಲ್ಲಿರುವಂತೆಯೇ ಇದೆ. ಇದರ ಬಗ್ಗೆ ಹಲವಾರು ಇತರ ಸುದ್ದಿ ವರದಿಗಳನ್ನು ಸಹ ನಾವು ಕಂಡುಕೊಂಡಿದ್ದೇವೆ, ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ಓದಬಹುದು.
ಅವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಯಾವುದೇ ದೇಣಿಗೆಯನ್ನು ಘೋಷಿಸಿದ್ದಾರೆಯೇ ಎಂದು ಪರಿಶೀಲಿಸಲು, ನಾವು ಸಂಬಂಧಿತ ಕೀವರ್ಡ್ಗಳೊಂದಿಗೆ ಇಂಟರ್ನೆಟ್ ಅನ್ನು ಹುಡುಕಿದ್ದೇವೆ ಆದರೆ ಯಾವುದೇ ಸಂಬಂಧಿತ ಮಾಹಿತಿ ಸಿಗಲಿಲ್ಲ. ಒಂದು ವೇಳೆ ಯಶ್ ಇಂತಹ ಘೋಷಣೆ ಮಾಡಿದ್ದರೆ, ಅದು ದೊಟ್ಟ ಮಟ್ಟದಲ್ಲಿ ಸುದ್ದಿಯಾಗುತ್ತಿತ್ತು. ಯಶ್ ಅವರ ತಿರುಪತಿ ಭೇಟಿಯ ಸಮಯದಲ್ಲಿ ತೆಗೆದ ಫೋಟೋವನ್ನು ಅವರು ಅಯೋಧ್ಯೆಗೆ ಭೇಟಿ ನೀಡಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಂಡಿದ್ದಾರೆ.
ನಟ ಯಶ್ ಅವರ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ (ಫೇಸ್ಬುಕ್, ಇನ್ಸ್ಟಾಗ್ರಾಮ್, ಟ್ವಿಟರ್) ಅಂತಹ ಯಾವುದೇ ಮಾಹಿತಿಯೂ ಲಭ್ಯವಾಗಿಲ್ಲ. ಈ ಎಲ್ಲಾ ಪುರಾವೆಗಳೊಂದಿಗೆ, ಯಶ್ ಅವರ ತಿರುಪತಿ ಭೇಟಿಯ ಸಮಯದಲ್ಲಿ ತೆಗೆದ ಫೋಟೋವನ್ನು ಅವರು ಅಯೋಧ್ಯೆಗೆ ಭೇಟಿ ನೀಡಿದ್ದಾರೆ ಎಂದು ಸಮಾಜಿಕ ಮಾಧ್ಯಮಗಳಲ್ಲಿ ತಪ್ಪಾಗಿ ಹಂಚಿಕೊಂಡಿದ್ದಾರೆ.
ಒಟ್ಟಾರೆಯಾಗಿ ಹೇಳುವುದಾದರೆ, ನಟ ಯಶ್ ಅಯೋಧ್ಯಗೆ ಭೇಟಿ ನೀಡಿ ರಾಮಮಂದಿರ ನಿರ್ಮಾಣಕ್ಕೆ 50 ಕೋಟಿ ದೇಣಿಗೆ ನೀಡಿದ್ದಾರೆ ಎಂಬುದು ಸುಳ್ಳು. ಹಾಗಾಗಿ ಪೋಸ್ಟ್ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : ಫ್ಯಾಕ್ಟ್ಚೆಕ್: ಜೀವಂತವಾಗಿರುವ BSF ಸೈನಿಕನನ್ನು’ ಹುತಾತ್ಮ’ ಎಂದು ಸುಳ್ಳು ಸುದ್ದಿ ಹಂಚಿಕೆ