ಫ್ಯಾಕ್ಟ್ಚೆಕ್: ಮಲ್ಲಿಕಾರ್ಜುನ ಖರ್ಗೆ ಅವರ ಹಳೆಯ ಭಾಷಣವನ್ನು ಇತ್ತೀಚಿನದ್ದು ಎಂದು ತಪ್ಪಾಗಿ ಹಂಚಿಕೆ
“ಮೋದಿ ಅಧಿಕಾರಕ್ಕೆ ಬಂದರೆ, ಸನಾತನ ಧರ್ಮ ಮತ್ತು ಆರೆಸ್ಸೆಸ್ ಆಳ್ವಿಕೆ ದೇಶದಲ್ಲಿ ಮತ್ತೆ ಬರುತ್ತದೆ”. ಎಂಬ ಹೇಳಿಕೆಯನ್ನು ಮಲ್ಲಿಕಾರ್ಜುನ ಖರ್ಗೆ ಇತ್ತೀಚೆಗೆ ನೀಡಿದ್ದಾರೆ ಎನ್ನುವ ವಿಡಿಯೋ ಪೋಸ್ಟ್ ವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ನಡೆದ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಗೆಲುವು ಸಾಧಿಸಿದ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ಮೋದಿಯವರ ಬಗ್ಗೆ ಮಾಡಿದ ಕಾಮೆಂಟ್ಗಳ ವಿಡಿಯೋ ಎಂದು ಹಂಚಿಕೊಳ್ಳಲಾದ ಪೋಸ್ಟ್ ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್:
ಸಂಬಂಧಿತ ಕೀವರ್ಡ್ಗಳೊಂದಿಗೆ ಗೂಗಲ್ ಸರ್ಚ್ ಮಾಡಿದಾಗ 06 ನವೆಂಬರ್ 2018 ರಂದು ‘ಯುಪಿ ತಕ್’ ಯು ಯೂಟ್ಯೂಬ್ ಚಾನೆಲ್ನಲ್ಲಿ ಅಪ್ಲೋಡ್ ಮಾಡಿದ ಈ ವೀಡಿಯೊದ ವಿಸ್ತೃತ ಆವೃತ್ತಿಯು “ಸನಾತನ ಆಡಳಿತದಿಂದ ಕಾಂಗ್ರೆಸ್ ತೊಂದರೆಗೀಡಾಗಿದೆಯೇ?” ಎಂಬ ಶೀರ್ಷಿಕೆಯೊಂದಿಗೆ ಪ್ರಸಾರ ಮಾಡಿರುವುದು ಕಂಡುಬಂದಿದೆ.
Zee News ಪ್ರಕಾರ, 04 ನವೆಂಬರ್ 2018 ರಂದು ಬಾಂದ್ರಾದಲ್ಲಿ ಮುಂಬೈ ಕಾಂಗ್ರೆಸ್ ಆಯೋಜಿಸಿದ್ದ ‘ಸಂವಿಧಾನ ರಕ್ಷಣಾ ಮಂಡಳಿ’ಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾಷಣದಲ್ಲಿ ಈ ಹೇಳಿಕೆಗಳನ್ನು ನೀಡಿದ್ದಾರೆ. ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರು 06 ನವೆಂಬರ್ 2018 ರಂದು ಟ್ವಿಟರ್ ಮೂಲಕ ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ.
ಒಟ್ಟಾರೆಯಾಗಿ ಹೇಳುವುದಾದರೆ, ಈ ವೀಡಿಯೊವು 04 ನವೆಂಬರ್ 2018 ರಂದು ಬಾಂದ್ರಾದಲ್ಲಿ ಮುಂಬೈ ಕಾಂಗ್ರೆಸ್ ಆಯೋಜಿಸಿದ್ದ ‘ಸಂವಿಧಾನ ರಕ್ಷಣಾ ಪರಿಷತ್ತಿನ’ ಸಂದರ್ಭದ್ದು ಎಂದು ತೋರಿಸುತ್ತದೆ. ಮಲ್ಲಿಕಾರ್ಜುನ ಖರ್ಗೆ 19 ಅಕ್ಟೋಬರ್ 2022 ರಂದು ನಡೆದ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ನಂತರ ಈ ಮಾತುಗಳನ್ನು ಆಡಿಲ್ಲ.ಹಳೆಯ ವಿಡಿಯೋವನ್ನು ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ನಂತರ ಮಾಡಿದ ಇತ್ತೀಚಿನ ಭಾಷಣ ಎಂದು ತಪ್ಪಾಗಿ ಹಂಚಿಕೊಂಡಿದ್ದಾರೆ.
ಅಪ್ಡೇಟ್ (22 ಅಕ್ಟೋಬರ್ 2022)
19 ಅಕ್ಟೋಬರ್ 2022 ರಂದು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಲ್ಲಿಕಾರ್ಜುನ ಖರ್ಗೆ ಅವರು ಈ ಭಾಷಣ ಮಾಡಿದ್ದಾರೆ ಎಂದು ಹೇಳುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣದ ಮತ್ತೊಂದು ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.
ಸಂಬಂಧಿತ ಕೀವರ್ಡ್ಗಳೊಂದಿಗೆ ಅಂತರ್ಜಾಲದಲ್ಲಿ ಸರ್ಚ್ ಮಾಡಿದಾಗ ಈ ಭಾಷಣದ ಮೂಲ ವೀಡಿಯೊ ಮಲ್ಲಿಕಾರ್ಜುನ ಖರ್ಗೆ ಅವರು 2018 ರಲ್ಲಿ ನಡೆದ 84ನೇ ಕಾಂಗ್ರೆಸ್ ಅಧಿವೇಶನದಲ್ಲಿ ಮಾಡಿದ ಭಾಷಣ ಎಂದು ತಿಳಿದುಬಂದಿದೆ. ಈ ಭಾಷಣ ಮಾಡಿದ್ದು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಅಲ್ಲ ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಪೋಸ್ಟ್ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ: ಫ್ಯಾಕ್ಟ್ಚೆಕ್: ಬಾಲಕ ಕೊಹ್ಲಿಗೆ ಪ್ರಶಸ್ತಿ ನೀಡುತ್ತಿರುವ ವ್ಯಕ್ತಿ ರಿಷಿ ಸುನಕ್ ಅಲ್ಲ