ಫ್ಯಾಕ್ಟ್‌ಚೆಕ್ : ಪಶ್ಚಿಮ ಬಂಗಾಳದಲ್ಲಿ ಗಾಯಗೊಂಡ ಸೈನಿಕನನ್ನು ಆಸ್ಪತ್ರೆಗೆ ಕರೆದೊಯ್ಯೂವಾಗ ಮುಸ್ಲಿಮರು ಸೇನಾ ವಾಹನ ತಡೆದದ್ದು ನಿಜವೇ?

ಪಶ್ಚಿಮ ಬಂಗಾಳದಲ್ಲಿ ಸೈನಿಕರ ಪರಿಸ್ಥಿತಿನೇ ಹೀಗಿರುವಾಗ ಸಾಮಾನ್ಯ ಹಿಂದುಗಳ ಪರಿಸ್ಥಿತಿ ಹೇಗಿರಬಹುದು? ಅವರುಗಳ ಜನಸಂಖ್ಯೆ ಜಾಸ್ತಿಯಾದರೆ ಭಾರತದಲ್ಲಿನ ಹಿಂದುಗಳ ಪರಿಸ್ಥಿತಿ ಹೇಗಾಗಬಹುದು? ಸ್ವಲ್ಪ ಯೋಚಿಸಿ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ವಾಟ್ಸಾಪ್ ನಿಂದ ಬಂದದ್ದು,
ಪಶ್ಚಿಮ ಬಂಗಾಳದಲ್ಲಿ ಗಾಯಗೊಂಡ ಸೇನಾ ಯೋಧನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ವಾಹನ ತಡೆದು ನಿಲ್ಲಿಸಿದ ಸ್ಥಿತಿ ಇದು. ನಿಮ್ಮ ಮಕ್ಕಳ ಭವಿಷ್ಯ ನೋಡಿ, *ಮುಸ್ಲಿಮ್ ಸಂಖ್ಯೆ 30 ಪರ್ಸೆಂಟ್* ಆಗಿರುವ ಸ್ಥಿತಿ ಇದು ಅಥವಾ ಅವರನ್ನು ಬೆಂಬಲಿಸುವ ಸೆಕ್ಯುಲರ್ ಸರ್ಕಾರವಿದೆ ಮತ್ತು ಹಿಂದೂಗಳ ಶತ್ರು ಹಿಂದೂಗಳು ಮಾತ್ರ, ಪರಿಸ್ಥಿತಿ ಹದಗೆಟ್ಟಾಗ, ಸೆಕ್ಯುಲರ್ ಆಗುವವರೆಗೆ ಹಿಂದೂಗಳ ಕಣ್ಣು ಮುಚ್ಚಿರುತ್ತದೆ ಹಿಂದೂಗಳ ಜೊತೆ ಇರುವುದಿಲ್ಲ ಅಲ್ಲಿಯವರೆಗೂ *ಯೋಗಿಗಳು ಮೋದಿಯವರನ್ನು* ಶಪಿಸುತ್ತಲೇ ಇರುತ್ತಾರೆ ಎದ್ದೇಳಿ ಇನ್ನೂ ಸಮಯವಿದೆ ಇವರನ್ನು ವಿರೋಧಿಸುವುದೋ ಶರಣಾಗುವುದೋ ನಿಮಗೆ ಬಿಟ್ಟಿದ್ದು ಅವರ ಧೈರ್ಯ ನೋಡಿ ಅವರು ಸೇನೆಯೊಂದಿಗೆ ಹೋರಾಡುತ್ತಿದ್ದಾರೆ ಅಲ್ವಾ?  ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋದಲ್ಲಿ ಮಾಡಲಾದ ಪ್ರತಿಪಾಧನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

‘ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶಕ್ಕೆ 2021ರ ಮಾರ್ಚ್‌ನಲ್ಲಿ ಭೇಟಿ ನೀಡಿದ್ದರು. ಅವರ ಭೇಟಿಯನ್ನು ಖಂಡಿಸಿ, ಅಲ್ಲಿನ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. 2021ರ ಮಾರ್ಚ್‌ 26ರಂದು ಚಿತ್ತಗಾಂಗ್‌ನಲ್ಲಿ ಭದ್ರತಾ ಪರಿಶೀಲನೆಗೆ ಎಂದು ಅಲ್ಲಿನ ಸೇನಾಧಿಕಾರಿಗಳು ಭೇಟಿ ನೀಡಿದ್ದರು. ಮೋದಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಮುಸ್ಲಿಮರು ಆ ಸೇನಾಧಿಕಾರಿಗಳ ವಾಹನಗಳನ್ನು ತಡೆದಿದ್ದರು. ಪ್ರತಿಭಟನೆಯ ಹಳೆಯ ವಿಡಿಯೊವನ್ನು ತಪ್ಪು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ’ ಎಂದು ಬೂಮ್ ವರದಿ ಮಾಡಿದೆ.

ಶನಿವಾರ ಪಶ್ಚಿಮ ಬಂಗಾಳದಲ್ಲಿ ಪಂಚಾಯತಿ ಚುನಾವಣೆಗೆ ಮತದಾನ ನಡೆಯುತ್ತಿದೆ. ಕೂಚ್‌ಬೆಹಾರ್‌ ಜಿಲ್ಲೆಯ ಫಲಿಮರಿ ಗ್ರಾಮ ಪಂಚಾಯತ್‌ನಲ್ಲಿ ಬಿಜೆಪಿಯ ಬೂತ್ ಏಜೆಂಟ್‌ ಮಧಾಬ್‌ ಬಿಸ್ವಾಸ್‌ ಎಂಬವರನ್ನು ಕೊಲೆ ಮಾಡಲಾಗಿದೆ. ಮತದಾನ ಪೂರ್ವ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಪಶ್ಚಿಮ ಬಂಗಾಳದಲ್ಲಿ, ಮತದಾನ ದಿನವೂ ಹಿಂಸಾಚಾರ ನಡೆದು ಹಲವು ಮಂದಿಯನ್ನು ಕೊಲೆ ಮಾಡಲಾಗಿದೆ. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ದೃಶ್ಯಕ್ಕೂ, ಪಶ್ವಿಮ ಬಂಗಾಳದ ಘಟನೆಗೂ ಸಂಬಂಧವಿಲ್ಲ

ಒಟ್ಟಾರೆಯಾಗಿ ಹೇಳುವುದಾದರೆ, ಬಾಂಗ್ಲಾದೇಶದಲ್ಲಿ 2021ರಲ್ಲಿ ನಡೆದ ಪ್ರತಿಭಟನೆಯ ವಿಡಿಯೋವನ್ನು, ಪಶ್ಚಿಮ ಬಂಗಾಳದಲ್ಲಿ ಗಾಯಗೊಂಡ ಸೇನಾ ಯೋಧನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಅಲ್ಲಿನ ಮುಸ್ಲಿಮರು ಸೇನಾ ವಾಹನಗಳಿಗೆ ತಡೆಯೊಡ್ಡಿದ್ದಾರೆ ಎಂಬ ತಪ್ಪು ಶೀರ್ಷಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಬೂಮ್

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಪ್ರಧಾನಿ ಮೋದಿ ವಿಶ್ವದ ಅತ್ಯುತ್ತಮ ಪ್ರಧಾನಿ ಎಂದು ಯುನೆಸ್ಕೋ ಹೇಳಿಲ್ಲ!


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights