FACT CHECK | ಮುಸ್ಲಿಂ ವ್ಯಕ್ತಿ ಶಾಲಾ ವಿದ್ಯಾರ್ಥಿಗೆ ಕಿರುಕುಳ ನೀಡುವ ವಿಡಿಯೋ ಭಾರತದ್ದಲ್ಲ, ಬಾಂಗ್ಲಾದೇಶದ್ದು

ಮುಸ್ಲಿಂ ವ್ಯಕ್ತಿಯೊಬ್ಬ ಶಾಲಾ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಈ ಘಟನೆ ಭಾರತದಲ್ಲಿ ನಡೆದಿದೆ ಎಂದು ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದರರು ವೀಡಿಯೊವನ್ನು ಹಂಚಿಕೊಂಡಿದ್ದಾರೆ.

“ಮುಸ್ಲಿಂ ವ್ಯಕ್ತಿಯೊಬ್ಬ ಶಾಲಾ ಬಾಲಕಿಗೆ ಕಿರುಕುಳ ನೀಡುತ್ತಿದ್ದಾಗ, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳು ಭಾರತದಲ್ಲಿ ಇವರಿಂದ ಯಾರಿಗೂ ನೆಮ್ಮದಿಯಿಲ್ಲ, ಬಾರತ ಪಾಕಿಸ್ತಾನವಾಗಿ ಬದಲಾಗುತ್ತಿದೆ, ಹಿಂದೂಗಳು ಅಪಾಯದಲ್ಲಿದ್ದಾರೆ ” ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಿದಾಗ, ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಈ ಘಟನೆ ಬಾಂಗ್ಲಾದೇಶದಲ್ಲಿ ಬಂದಿದೆ ಎಂದು ಪ್ರತಿಕ್ರಯಿಸಿದ್ದಾರೆ. ವೈರಲ್ ವಿಡಿಯೋಗೆ ಸಂಬಂಧಿಸಿದ ಕೀವರ್ಡ್‌ಗಳನ್ನು ಬಳಸಿ ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಮಾರ್ಚ್ 18 ರಂದು ಬಾಂಗ್ಲಾ ಮೂಲದ ಸುದ್ದಿವಾಹಿನಿ ಜಮುನಾ ಟಿವಿಯ ವರದಿಯೊಂದು ಲಭ್ಯವಾಗಿದೆ.

দিনাজপুরে স্কুলছাত্রীর শ্লীলতাহানির চেষ্টা, যুবক গ্রেপ্তার 

ಲಭ್ಯವಾದ ವರದಿಯ ಪ್ರಕಾರ, ಈ ಘಟನೆಯು ಬಾಂಗ್ಲಾದೇಶದ ದಿನಾಜ್‌ಪುರದಲ್ಲಿ ನಡೆದಿದೆ. ಬಾಂಗ್ಲಾ ನ್ಯೂಸ್ 24 ರ ಪ್ರಕಾರ, ಮಾರ್ಚ್ 17 ರಂದು ಶಾಲಾ ವಿದ್ಯಾರ್ಥಿನಿ ತನ್ನ ಸಹೋದರಿಯ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ಘಟನೆಯ ನಂತರ ಆಕೆಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

CNI ಏಷ್ಯಾದ ವರದಿಯ ಪ್ರಕಾರ, ದೌರ್ಜನ್ಯಕ್ಕೊಳಗಾದ ವಿಧ್ಯಾರ್ಥಿ 6 ನೇ ತರಗತಿಯಲ್ಲಿ ಓದುತ್ತಿದ್ದು. ತನ್ನ ಸಹೋದರಿಯ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ದೌರ್ಜನ್ಯ ನಡೆದಿದ್ದು, ಆರೋಪಿ ಬಾಂಗ್ಲಾದೇಶದ ಸಖಾವತ್‌ನ ಬಲುದಂಗ ಪ್ರದೇಶದ ಅರಿಫುಲ್ ಇಸ್ಲಾಂ ಮಿಂಟು ಎಂಬುವವರ ಪುತ್ರ ಎಂದು ವರದಿಯಾಗಿದೆ. ಆರೋಪಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದ ಎಂದು ಆತನ ಕುಟುಂಬದ ಮೂಲಗಳು ತಿಸಿವೆ ಎಂದು ವರದಿಯಾಗಿದೆ.

ಹೆಚ್ಚಿನ ಮಾಹಿತಿಗಾಗಿ, ಇಂಡಿಯಾ ಟುಡೇ  ದಿನಾಜ್‌ಪುರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಶಾ ಇಫ್ತೆಕರ್ ಅಹ್ಮದ್ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದಿದದ್ದು, ಮಾರ್ಚ್ 17 ರಂದು 12 ವರ್ಷದ ಹಿಂದೂ ಬಾಲಕಿ ಮೇಲೆ ಸಖಾವತ್ ಹೊಸೈನ್ ಎಂಬ ವ್ಯಕ್ತಿ ದೌರ್ಜನ್ಯ ನಡಸಿದ್ದಾನೆ ಎಂದು ಹೇಳಿದ್ದಾರೆ.

“ಸಂತ್ರಸ್ತೆಯ ತಂದೆಯಿಂದ ದೂರು ನೀಡಿದ ನಂತರ ದಿನಜ್‌ಪುರದ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ತಡೆ ಕಾಯಿದೆ, 2000 ಅಡಿಯಲ್ಲಿ ಪ್ರಕರಣ ದಾಖಲಿಸಿ, ಮಾರ್ಚ್ 18 ರಂದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಅಲ್ಲದೆ ಬಾಂಗ್ಲಾದೇಶ ಮೂಲದ ವರದಿಗಾರ ಶಾಹಿದುಲ್ ಹಸನ್ ಖೋಕನ್ ಕೂಡ ಈ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ ಎಂದು ದೃಢಪಡಿಸಿದ್ದಾರೆ ಎಂದು ಇಂಡಿಯಾ ಟುಡೇ ಉಲ್ಲೇಖಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಯಾವುದೇ ಅಪರಾಧ ಪ್ರಕರಣಗಳನ್ನು ಜಾತಿ ಮತ್ತು ಧರ್ಮದ ಆಧಾರದಲ್ಲಿ ನೋಡದೆ ಅಪರಾದ ಪ್ರಕರಣವಾಗಷ್ಟೆ ನೋಡಬೇಕು. ಹಾಗಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಂತೆ ಈ ಘಟನೆಯು ಭಾರತದಲ್ಲಿ ನಡೆದಿಲ್ಲ. ಈ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | 2024 ಕ್ಕೆ ಮತ್ತೊಮ್ಮೆ ಮೋದಿ ಎಂಬ ಪೋಸ್ಟ್‌ರ್ ಅನ್ನು ರಾಹುಲ್ ಗಾಂಧಿ ಪ್ರದರ್ಶಿಸಿದ್ದಾರೆ ಎಂದು ಸುಳ್ಳು ಪೋಸ್ಟ್‌ ಹಂಚಿಕೊಂಡ ಬಿಜೆಪಿ ಬೆಂಬಲಿಗರು


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights