FACT CHECK | ‘ಪ್ರಧಾನ ಮಂತ್ರಿ ವಿಶ್ವಕರ್ಮ ಉಚಿತ ಹೊಲಿಗೆ ಯಂತ್ರ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ 15 ಸಾವಿರ ನೀಡಲಿದೆ ಎಂಬುದು ಸುಳ್ಳು

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಂಗವಾಗಿ ಕೇಂದ್ರ ಸರ್ಕಾರ ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಇದರ ಅಡಿಯಲ್ಲಿ, ಹೊಲಿಗೆ ಯಂತ್ರವನ್ನು ಖರೀದಿಸಲು ಕೇಂದ್ರ ಸರ್ಕಾರ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ 15,000 ರೂ ಜಮೆ ಮಾಡಲಾಗುತ್ತದೆ.

ಹಾಗಾಗಿ ಟೈಲರಿಂಗ್ ಮಾಡಿ ಹಣ ಸಂಪಾದಿಸಬಹುದು. ಕೇಂದ್ರ ಸರ್ಕಾರ ರೂ.20 ಸಾವಿರದವರೆಗೆ ಸಾಲ ನೀಡುತ್ತಿದೆ” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.  ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಂಗವಾಗಿ ಕೇಂದ್ರ ಸರ್ಕಾರ ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ಜಾರಿಗೊಳಿಸಿದ್ದು, ಅದರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ರೂ 15 ಸಾವಿರ ಜಮೆ ಮಾಡುತ್ತದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಕೀವರ್ಡ್‌ಗಳನ್ನು ಬಳಸಿಕೊಂಡು ಪಿಎಂ ವಿಶ್ವಕರ್ಮ ಯೋಜನೆ ಕುರಿತು ಗೂಗಲ್ ಸರ್ಚ್ ಮಾಡಿದಾಗ, ‘ಪ್ರಧಾನಿ ವಿಶ್ವಕರ್ಮ ಕೌಶಲ ಸಮ್ಮಾನ್ ಯೋಜನೆ’ ಅಡಿಯಲ್ಲಿ ಯಾವುದೇ ಉಚಿತ ಹೊಲಿಗೆ ಯಂತ್ರ ಯೋಜನೆ ಲಭ್ಯವಿಲ್ಲ ಮಾಹಿತಿ ಲಭ್ಯವಾಗಿದೆ. ಇದಲ್ಲದೆ, ಪಿಐಬಿ ಫ್ಯಾಕ್ಟ್ ಚೆಕ್ ‘ಎಕ್ಸ್’ ವೇದಿಕೆಯಲ್ಲಿ ‘ಕೇಂದ್ರ ಸರ್ಕಾರವು ಯಾವುದೇ ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ಜಾರಿಗೊಳಿಸುತ್ತಿಲ್ಲ, ಇದು ನಕಲಿ ಸುದ್ದಿ’ ಎಂದು ಪೋಸ್ಟ್ ಮಾಡಿದೆ.


ಮುಂದುವರೆದು, ‘ಪ್ರಧಾನಿ ವಿಶ್ವಕರ್ಮ ಕೌಶಲ ಸಮ್ಮಾನ್ ಯೋಜನೆ’ ಅಡಿಯಲ್ಲಿ, 18 ಕೌಶಲ್ಯ ಕಲೆಗಳಲ್ಲಿ  ಯಾವುದಾದರೂ ಒಂದರಲ್ಲಿ ತೊಡಗಿರುವ ಕುಶಲಕರ್ಮಿಗಳು, ಕುಟುಂಬ ಆಧಾರಿತ ಸಾಂಪ್ರದಾಯಿಕ ವ್ಯಾಪಾರಗಳು, ಕೈ ಮತ್ತು ಸಾಧನಗಳೊಂದಿಗೆ ಕೆಲಸ ಮಾಡುವವರು ಈ ಯೋಜನೆಗೆ ಅರ್ಹರಾಗಿದ್ದಾರೆ ಎಂದು ಮಾರ್ಗಸೂಚಿಗಳ ಪ್ಯಾರಾ 2.3 ರಲ್ಲಿ ಉಲ್ಲೇಖಿಸಲಾಗಿದೆ. ಈ 18 ಕಲೆಗಳಲ್ಲಿ ಟೈಲರಿಂಗ್ ಸೇರಿರುವುದನ್ನು ನಾವು ಕಾಣುತ್ತೇವೆ.

ಹೊಲಿಗೆ ಯಂತ್ರ ಖರೀದಿಸಲು ಫಲಾನುಭವಿಯ ಬ್ಯಾಂಕ್ ಖಾತೆಗೆ ನೇರವಾಗಿ 15 ಸಾವಿರ ರೂ.ಗಳನ್ನು ಕೇಂದ್ರ ಜಮಾ ಮಾಡುವುದಾಗಿ ಎಲ್ಲಿಯೂ ಹೇಳಿಲ್ಲ. ಆದರೆ, ಈ ಯೋಜನೆಯಡಿ ಫಲಾನುಭವಿಗಳ ಕೌಶಲ್ಯ ಮೌಲ್ಯಮಾಪನದ ನಂತರ, ಇ-ರೂಪಿ/ಇ-ವೋಚರ್‌ಗಳ ರೂಪದಲ್ಲಿ ಅವರ ಮೂಲಭೂತ ತರಬೇತಿಯ ಆರಂಭದಲ್ಲಿ ರೂ. 15000 ಪ್ರೋತ್ಸಾಹಧನ ನೀಡಲಾಗುವುದು. ಈ ವೋಚರ್‌ಗಳನ್ನು ಟೂಲ್‌ಕಿಟ್‌ಗಳನ್ನು ಖರೀದಿಸಲು ಸರ್ಕಾರ ಗೊತ್ತುಪಡಿಸಿದ ಕೇಂದ್ರಗಳಲ್ಲಿ ಬಳಸಬಹುದು.

ಇದಲ್ಲದೆ, ಫಲಾನುಭವಿಗಳ ಮೂಲ ತರಬೇತಿಯನ್ನು ಪೂರ್ಣಗೊಳಿಸಿದ ನಂತರ ಫಲಾನುಭವಿಗಳಿಗೆ ‘ಉದ್ಯಮ ಅಭಿವೃದ್ಧಿ ಸಾಲ’ ರೂಪದಲ್ಲಿ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಅರ್ಹ ವ್ಯಕ್ತಿಗಳು ರೂ ಐದು ಶೇಕಡಾ ರಿಯಾಯಿತಿ ಬಡ್ಡಿ ದರದಲ್ಲಿ 3 ಲಕ್ಷ ಸಾಲ ದೊರೆಯಲಿದೆ. ಇದಲ್ಲದೇ ಕೇಂದ್ರ ಸರ್ಕಾರ ಟೈಲರಿಂಗ್ ಶಾಪ್ ಸ್ಥಾಪಿಸಲು ರೂ. 20,000 ವರೆಗೆ ಸಾಲ ನೀಡುವುದಾಗಿ ಎಲ್ಲಿಯೂ ನಮೂದಿಸಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಕೇಂದ್ರ ಸರ್ಕಾರವು ‘ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ’ ಅಡಿಯಲ್ಲಿ ಯಾವುದೇ ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ನೀಡುತ್ತಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಪವಿತ್ರ ಬಕ್ರೀದ್ ಹಬ್ಬದಂದು ಮುಸ್ಲಿಮರು ಎಮ್ಮೆ ತಲೆಯನ್ನು ದೇವಸ್ಥಾನದ ಆವರಣಕ್ಕೆ ಎಸೆದಿದ್ದಾರೆ ಎಂದು ಸಂಬಂಧವಿಲ್ಲದ ಫೋಟೊ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights