FACT CHECK | ಸಾವಿರಾರು ಬಾಂಗ್ಲಾ ಮುಸ್ಲಿಮರು ಭಾರತಕ್ಕೆ ಬಂದಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ರೈಲಿನ ತುಂಬಾ ಕಿಕ್ಕಿರುದು ಜನ ಪ್ರಯಾಣಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಈ ರೈಲು ಬಾಂಗ್ಲಾದೇಶದಿಂದ ಭಾರತದ ಕಡೆಗೆ ಬರುತ್ತಿದೆ ಎಂದು ಹೇಳಲಾಗುತ್ತಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

ಮುಂದಿನ ದಿನಗಳಲ್ಲಿ ನಿಮ್ಮ ಆಸ್ತಿಯನ್ನು ರಕ್ಷಿಸಲು ಸಾಧ್ಯವಾಗುವುದಿಲ್ಲ, ಈ ಗುಂಪಿನ ಮುಂದೆ ನಿಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ರಕ್ಷಿಸಲು ಸಾಧ್ಯವಿಲ್ಲ ಅಸ್ಸಾಂ ಮತ್ತು ಕೋಲ್ಕತ್ತಾ ಮೂಲಕ ಬಾಂಗ್ಲಾದೇಶ ಈ ಮುಸ್ಲಿಮರನ್ನು ವಿರೋಧಿಸಲು ಇನ್ನೂ ಸಮಯವಿದೆ. ಇಲ್ಲದಿದ್ದರೆ ನಿಮಗೆ ಅಳಲು ಕಣ್ಣೀರು ಕೂಡ ಇರುವುದಿಲ್ಲ.” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವೈರಲ್ ವಿಡಿಯೋ ಮೂಲತಃ ಬಾಂಗ್ಲಾದೇಶದ್ದಾಗಿದೆ ಎಂದು ತಿಳಿದು ಬಂದಿದೆ.

ಗೆಟ್ಟಿ ಇಮೇಜಸ್‌ನಲ್ಲಿ ವೈರಲ್ ಪೋಟೋ ಲಭ್ಯವಾಗಿದ್ದು, “ಅಂತಿಮ ಪ್ರಾರ್ಥನೆಯೊಂದಿಗೆ ಬಿಶ್ವಾ ಇಜ್ತೆಮಾದ ಮೊದಲ ಹಂತ ಮುಕ್ತಾಯ. ಬಿಸ್ವಾ ಇಜ್ತೆಮಾ ಎಂದು ಕರೆಯಲ್ಪಡುವ ಮುಸ್ಲಿಮರ ವಾರ್ಷಿಕ  ಸಭೆ 2020 ರ ಜನವರಿ 12 ರಂದು ಬಾಂಗ್ಲಾದೇಶದ ಢಾಕಾ ಬಳಿಯ ಟೋಂಗಿಯಲ್ಲಿ ಕೊನೆಗೊಳ್ಳುವುದರಿಂದ ಬಾಂಗ್ಲಾದೇಶದ ಮುಸ್ಲಿಂ ಭಕ್ತರು ಅಖೇರಿ ಮುನಾಜತ್ ಅಥವಾ ಅಂತಿಮ ಪ್ರಾರ್ಥನೆಯಲ್ಲಿ ಭಾಗವಹಿಸಿದ ನಂತರ ಕಿಕ್ಕಿರಿದ ರೈಲಿನಲ್ಲಿ ಹೊರಡುತ್ತಾರೆ. ಟೋಂಗಿಯ ತುರಾಗ್ ನದಿಯ ದಡದಲ್ಲಿ ಅಖೇರಿ ಮುನಾಜತ್ ನೊಂದಿಗೆ ವಾರ್ಷಿಕ ಮುಸ್ಲಿಮರ ಸಭೆ ಕೊನೆಗೊಳ್ಳುತ್ತಿದ್ದಂತೆ ಸಾವಿರಾರು ಮುಸ್ಲಿಮರು ಮಾನವಕುಲದ ಆಶೀರ್ವಾದಕ್ಕಾಗಿ ಕೈ ಎತ್ತಿದರು.” ಎಂಬ ಶೀರ್ಷಿಕೆ ನೀಡಲಾಗಿದೆ.

(ಚಿತ್ರ: ಮಾಮುನೂರ್ ರಶೀದ್/ ನೂರ್ ಫೋಟೋ ಮೂಲಕ ಗೆಟ್ಟಿ ಇಮೇಜಸ್)

ಶಟರ್‌ ಸ್ಟಾಕ್ ಎಂಬ ಇನ್ನೊಂದು ಪೋಟೋ ವೆಬ್ಸೈಟ್‌  ನಲ್ಲಿ ವೈರಲ್ ಚಿತ್ರಗಳು ದೊರೆತಿದ್ದು, “ಫೆಬ್ರವರಿ 11, 2024 ರಂದು ಬಾಂಗ್ಲಾದೇಶದ ಢಾಕಾದಲ್ಲಿರುವ ಟೋಂಗಿಯಲ್ಲಿರುವ ಬಿಸ್ವಾ ಇಜ್ತೆಮಾದಲ್ಲಿ ಅಖೇರಿ ಮುನಾಜತ್ ಅಥವಾ ಎರಡನೇ ಹಂತದ ಅಂತಿಮ ಪ್ರಾರ್ಥನೆಯಲ್ಲಿ ಭಾಗವಹಿಸಿದ ನಂತರ ಮುಸ್ಲಿಂ ಭಕ್ತರು ಕಿಕ್ಕಿರಿದ ರೈಲಿನಲ್ಲಿ ಹೊರಡುತ್ತಾರೆ” ಎಂದು ಶೀರ್ಷಿಕೆ ನೀಡಲಾಗಿದೆ.

ಇಲ್ಲಿ ಎಲ್ಲಿಯೂ ಬಾಂಗ್ಲಾದೇಶದಿಂದ ಕಲ್ಕತ್ತಾ ಅಥವಾ ಭಾರತಕ್ಕೆ ಬರುತ್ತಿರುವ ರೈಲು ಎಂದು ಉಲ್ಲೇಖಿಸಿಲ್ಲ. ಈ ಚಿತ್ರಗಳ ಮೂಲಕ ಪ್ರತೀ ವರ್ಷ ಬಾಂಗ್ಲಾದೇಶದಲ್ಲಿ ಬಿಸ್ವಾ ಇಜ್ತೆಮಾದಲ್ಲಿ ಅಖೇರಿ ಮುನಾಜತ್ ಎಂಬಲ್ಲಿ ವಾರ್ಷಿಕ ಪ್ರಾರ್ಥನೆ ನಡೆಯುತ್ತದೆ ಮತ್ತು ಅಲ್ಲಿಗೆ ಸಾವಿರಾರು ಜನ ಮುಸ್ಲಿಂ ಭಕ್ತಾದಿಗಳು ಕಿಕ್ಕಿರಿದ ರೈಲಿನಲ್ಲಿ ಆಗಮಿಸುತ್ತಾರೆ ಎಂದು ತಿಳಿಸಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರತೀ ವರ್ಷ ಬಾಂಗ್ಲಾದೇಶದಲ್ಲಿ ಬಿಸ್ವಾ ಇಜ್ತೆಮಾದಲ್ಲಿ ಅಖೇರಿ ಮುನಾಜತ್ ಎಂಬಲ್ಲಿ ವಾರ್ಷಿಕ ಪ್ರಾರ್ಥನೆ ನಡೆಯುತ್ತದೆ. ಈ ಪ್ರಾರ್ಥನೆಗೆ ಸಾವಿರಾರು ಜನ ಮುಸ್ಲಿಂ ಭಕ್ತಾದಿಗಳು ಸೇರುತ್ತಾರೆ ಈ ವಿಡಿಯೋವನ್ನು ಸುಳ್ಳು ಪ್ರತಿಪಾದನೆಯೊಂದಿಗೆ ಬಾಂಗ್ಲಾದೇಶದಿಂದ ಕಲ್ಕತ್ತಾ ಅಥವಾ ಭಾರತಕ್ಕೆ ಬರುತ್ತಿರುವ ರೈಲು ಎಂದು ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಮದರಸದಲ್ಲಿ ಬಾಲಕನನ್ನು ನೇತು ಹಾಕಿ ಹಿಂಸಿಸುತ್ತಿರುವ ದೃಶ್ಯ ಭಾರತದ್ದಲ್ಲ! ಮತ್ತೆಲ್ಲಿಯದ್ದು


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights