FACT CHECK | ಗುಲ್ಬರ್ಗಾ ಮತ್ತು ಬೀದರ್​ನಲ್ಲಿ ಇರಾನಿ ಗ್ಯಾಂಗ್‌ ದರೋಡೆಗಿಳಿದಿದೆ ಎಂಬ ಎಚ್ಚರಿಕೆಯ ಪೋಸ್ಟ್‌ನ ಸತ್ಯಾಂಶವೇನು?

ಗುಲ್ಬರ್ಗಾ ಮತ್ತು ಬೀದರ್​ನ ಇರಾನಿ ಗ್ಯಾಂಗ್‌ನ ಜನರು ಕಂಬಳಿ ಮಾರುವವರಂತೆ ನಟಿಸಿ ಜನರ ಮನೆಗಳಿಗೆ ತೆರಳಿ ಲೂಟಿ ಮಾಡುತ್ತಾರೆ ಎಂದು ದೆಹಲಿ ಪೊಲೀಸರು ಎಚ್ಚರಿಸಿದ್ದಾರೆ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

ಆಗಸ್ಟ್ 23, 2024 ರಂದು ಲೈವ್ ನ್ಯೂಸ್ ಹಿಮಾಚಲ ಟಿವಿ ಎಂಬ ಫೇಸ್​ಬುಕ್ ಖಾತೆಯಲ್ಲಿ ಈ ವೈರಲ್ ಫೋಟೋವನ್ನು ಹಂಚಿಕೊಂಡು ಶೀರ್ಷಿಕೆಯಲ್ಲಿ ಹೀಗೆ ಬರೆದಿದ್ದಾರೆ, “ಇವರು ಬೀದರ್ ಮತ್ತು ಗುಲ್ಬರ್ಗಾದ ಇರಾನ್ ಗ್ಯಾಂಗ್, ಬೆಡ್‌ಶೀಟ್ ಮಾರಾಟ ಮಾಡುವಂತೆ ನಟಿಸುತ್ತಿದ್ದಾರೆ. ದಯವಿಟ್ಟು ಗಮನಿಸಿ, ಅವರೆಲ್ಲರೂ ದರೋಡೆಕೋರರು. ಇವರು ಹಗಲಿನಲ್ಲಿ ಕಂಬಳಿ ಮಾರಾಟಗಾರರಂತೆ ನಟಿಸುವ ಮೂಲಕ ಜನರ ಬಳಿ ಬರುತ್ತಾರೆ, ಮನೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ನಂತರ ಮನೆಯನ್ನು ದರೋಡೆ ಮಾಡುತ್ತಾರೆ, ಹೀಗಾಗಿ ಪ್ರತಿಯೊಬ್ಬರೂ ಇದನ್ನು ಆದಷ್ಟು ಶೇರ್ ಮಾಡಿಕೊಳ್ಳಿ. ದೆಹಲಿ ಪೊಲೀಸ್’’ ಎಂದು ಬರೆಯಲಾಗಿದೆ.

ಬೀದರ್ ಮತ್ತು ಗುಲ್ಬರ್ಗಾದ ಇರಾನ್ ಗ್ಯಾಂಗ್ ಮನೆಗಳನ್ನು ದರೋಡೆ ಮಾಡುವ ಕಂಬಳಿ ಮಾರಾಟಗಾರರಂತೆ ನಟಿಸುತ್ತಿದ್ದಾರೆ ಎಂಬ ಪ್ರತಿಪಾದನೆಯೊಂದಿಗೆ ಹಲವರು ಪೋಸ್ಟ್ಅನ್ನು (ಇಲ್ಲಿಇಲ್ಲಿ  ನೋಡಬಹುದು) ಹಂಚಿಕೊಳ್ಳುತ್ತಿದ್ದಾರೆ.  ಹಾಗಿದ್ದರೆ ಪೊಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಉದಯವಾಣಿ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯೊಂದು ಲಭ್ಯವಾಗಿದೆ. ಈ ಸುದ್ದಿಯನ್ನು 29 ಜುಲೈ 2019 ರಂದು ಪ್ರಕಟಿಸಲಾಗಿದೆ. ‘ಕಂಬಳಿ ಮಾರಾಟದ ನೆಪದಲ್ಲಿ ಬಂದಿರುವ ಇರಾನಿ ಗ್ಯಾಂಗ್‌ನ ಬಗ್ಗೆ ಬಜ್ಪೆ ಪೊಲೀಸರು ಎಚ್ಚರಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಹಾಗೂ ಆ ಜಿಲ್ಲೆಯ ಇತರ ಪ್ರದೇಶಗಳಲ್ಲಿ ಈ ಗ್ಯಾಂಗ್ ಈಗಾಗಲೇ ಸಕ್ರಿಯವಾಗಿದೆ. ಹಗಲು ಹೊತ್ತಿನಲ್ಲಿ ಕಂಬಳಿ ಮಾರುವವರಾಗಿ ಸಾರ್ವಜನಿಕರನ್ನು ಸಂಪರ್ಕಿಸಿ, ಮನೆ ಸಮೀಕ್ಷೆ ನಡೆಸಿ ನಂತರ ಮನೆ ಲೂಟಿ ಮಾಡುವುದು ಗ್ಯಾಂಗ್ ಸದಸ್ಯರ ವಿಧಾನವಾಗಿದೆ.’ ಎಂದು ಮಂಗಳೂರಿನ ಬಜ್ಪೆ ಪೊಲೀಸರು ಹೇಳಿರುವ ಮಾಹಿತಿ ಇದರಲ್ಲಿದೆ.

 

29 ಜುಲೈ, 2019 ರಂದು ಡೈಜಿ ವರ್ಲ್ಡ್ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ಈ ಜನರು ಇರಾನ್ ಗ್ಯಾಂಗ್‌ನ ಸದಸ್ಯರು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದರು. ಹೊದಿಕೆ ಮಾರುವ ನೆಪದಲ್ಲಿ ಬೆಳಗ್ಗೆಯೇ ಮನೆಗಳಿಗೆ ನುಗ್ಗಿ ಇಡೀ ಮನೆಯನ್ನು ಶೋಧಿಸುತ್ತಾರೆ. ಸಂಜೆಯಾಗುತ್ತಿದ್ದಂತೆ ಇತರೆ ಸದಸ್ಯರು ಬಂದು ಮನೆ ದೋಚುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಲ್ಲಿದೆ.

ತನಿಖೆಯ ಸಮಯದಲ್ಲಿ, ಈ ಪೋಸ್ಟ್ 2019 ರಿಂದ ಅನೇಕ ರಾಜ್ಯಗಳ ಹೆಸರಿನಲ್ಲಿ ವೈರಲ್ ಆಗಿರುವುದನ್ನು ಕಾಣಬಹುದು. 2019 ರಲ್ಲಿ, ಈ ಪೋಸ್ಟ್ ತೆಲಂಗಾಣ ಹೆಸರಿನಲ್ಲಿ ವೈರಲ್ ಆಗಿತ್ತು. ಆ ಸಮಯದಲ್ಲಿ, ಎಕ್ಸ್‌ ಖಾತೆಯ ಬಳಕೆದಾರರೊಬ್ಬರು ಹೈದರಾಬಾದ್ ಪೊಲೀಸರನ್ನು ಟ್ಯಾಗ್ ಮಾಡಿ ಅದರ ಸತ್ಯಾಸತ್ಯತೆಯ ಬಗ್ಗೆ ಕೇಳಿದ್ದರು. ಆಗ ಪೊಲೀಸರು ಇದು ಪೋಸ್ಟ್ ನಕಲಿ ಎಂದು ಉತ್ತರಿಸಿದ್ದರು.

ಒಟ್ಟಾರೆಯಾಗಿ ಹೇಳುವುದಾದರೆ, ಮಂಗಳೂರಿನ ಬಜ್ಪೆ ಪೊಲೀಸರು ಮನೆಗಳನ್ನು ದರೋಡೆ ಮಾಡಲು ಕಂಬಳಿ ಮಾರಾಟಗಾರರಂತೆ ಬರುತ್ತಿರುವ ಇರಾನಿನ ಗ್ಯಾಂಗ್ ಬಗ್ಗೆ 2019ರ ಜುಲೈನಲ್ಲಿ ಎಚ್ಚರಿಕೆ ನೀಡಿದ್ದ ಪೋಸ್ಟ್‌ಅನ್ನು ಇತ್ತಿಚಿನದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ  ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಮಧ್ಯರಾತ್ರಿಯಿಂದಲೇ ಬ್ಯಾನ್ ಆಗಲಿದೆಯೇ ರೂ 200 ಮುಖಬೆಲೆಯ ನೋಟುಗಳು?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights