ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯ : ಕೂಲಿ ಕಾರ್ಮಿಕ ನಿಗೆ ವಿದ್ಯುತ್ ಶಾಕ್….
ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೂಲಿ ಕಾರ್ಮಿಕ ನಿಗೆ ವಿದ್ಯುತ್ ಶಾಕ್ ಹೊಡೆದ ಪ್ರಕರಣ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಕ್ಯಾತನಹಳ್ಳಿಯಲ್ಲಿ ನಡೆದಿದೆ.
ವಿದ್ಯುತ್ ಕಡಿತವಾಗಿದೆ ಎಂದು ವಿದ್ಯುತ್ ಕಂಬಕ್ಕೆ ಹತ್ತಿಸಿರೋ ಲೈನ್ ಮೆನ್ ವಿದ್ಯುತ್ ಶಾಕ್ ಹೊಡೆದು ಕಂಬದ ಮೇಲಿಂದ ಬಿದ್ದದ್ದು, ತೀವ್ರ ಅಸ್ವಸ್ಥಗೊಂಡಿದ್ದಾನೆ. ಶಿಂಡೇನಹಳ್ಳಿ ಅಮವಾಸೇಗೌಡ ಪುತ್ರ ದಿನೇಶ್ (20) ಗಾಯಗೊಂಡ ಯುವಕ.
ವಿದ್ಯುತ್ ಶಾಕ್ ಹೊಡೆದು ಕಂಬದ ಮೇಲಿಂದ ಬಿದ್ದ ಕೂಲಿ ಕಾರ್ಮಿಕ ಗಂಭೀರವಾಗಿ ಗಾಯಗೊಂಡ ಯುವಕ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ವರೆಗೂ ಕೆಇಬಿ ಅಧಿಕಾರಿಗಳು ಯುವಕನ ಆರೋಗ್ಯ ಸ್ಥಿತಿ ವಿಚಾರಿಸದ ಕಾರಣ ಸ್ಥಳಕ್ಕೆ ಅಧಿಕಾರಿಗಳು ಬರುವಂತೆ ಸಂಬಂಧಿಕರು ಆಗ್ರಹಿಸಿದ್ದಾರೆ.