ಭಗ್ನ ಪ್ರೇಮಿಯಿಂದ ಯುವತಿಗೆ ಚಾಕು ಇರಿತ : ಸಾವು ಬದುಕಿನ ನಡುವೆ ಯುವತಿ..!
ಭಗ್ನ ಪ್ರೇಮಿಯೊಬ್ಬ ಯುವತಿಗೆ ಚಾಕು ಇರಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಖಾಂಡ್ಯಾದ ಮಾಲಗೋಡದಲ್ಲಿ ನಡೆದಿದೆ.
ಸಾವು ಬದುಕಿನ ನಡುವೆ ಹೋರಾಡ್ತಿರೋ ಯುವತಿಯ ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ರವಾನೆ ಮಾಡಲಾಗಿದೆ.
ಭಗ್ನ ಪ್ರೇಮಿ ಮಿಥುನ್ ನಿಂದ ಕೃತ್ಯ ಎಸಗಲಾಗಿದ್ದು ಆರೋಪಿ ಪರಾರಿಯಾಗಿದ್ದಾನೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಪತ್ತೆಗಾಗಿ ಪೋಲೀಸರು ಬಲೆ ಬೀಸಿದ್ದಾರೆ.