ಹಬ್ಬ ಆಚರಿಸಲು ಸಿದ್ಧತೆ ಮಾಡಿಕೊಂಡಿದ್ದ ದಂಪತಿ ಆತ್ಮಹತ್ಯೆಗೆ ಶರಣು…!
ಮಾನಸಿಕ ಖಿನ್ನತೆಗ ಒಳಗಾಗಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಆಗರದಳ್ಳಿ ಕ್ಯಾಂಪ್ ನಲ್ಲಿ ನಡೆದಿದೆ.
ಸಂತೋಷ್(32) ಹಾಗೂ ಪಾರ್ವತಿ(27) ಮೃತ ದುರ್ದೈವಿ ದಂಪತಿ ಕಳೆದ ಒಂದುವರೆ ವರ್ಷದ ಹಿಂದೆ ಮದುವೆಯಾಗಿದ್ದರು. ನಿನ್ನೆ ಸಂಜೆ ಮನೆಯಲ್ಲಿ ಸೀರೆಯಿಂದ ದಂಪತಿ ನೇಣು ಬಿಗಿದುಕೊಂಡಿದ್ದಾರೆ.
ಭೂಮಿಹುಣ್ಣಿಮೆ ಹಬ್ಬ ಆಚರಿಸಲು ಸಿದ್ಧತೆ ಮಾಡಿಕೊಂಡಿದ್ದ ದಂಪತಿ. ಮನೆಯವರನ್ನು ಗದ್ದೆಗೆ ಕಳುಹಿಸಿದ ನಂತರ ನೇಣಿಗೆ ಶರಣಾಗಿದ್ದಾರೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ವಿಚಾರಣೆ ನಡೆಸಿದ್ದಾರೆ.