ಮಿನಿಬಸ್ ಪಲ್ಟಿ ಇಬ್ಬರು ಸ್ಥಳದಲ್ಲೆ ಸಾವು : 12 ಜನಕ್ಕೆ ಗಾಯ…..!
ಮಿನಿಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಮಂಡ್ಯದ ನಾಗಮಂಗಲ ತಾಲ್ಲೂಕಿನ ಕದಬಹಳ್ಳಿಯಲ್ಲಿ ಮುಂಜಾನೆ ನಡೆದಿದೆ. ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಹೊಸಕೋಟೆ ಮೂಲದ ಗೌತಮ್ (20), ಮತ್ತು ದರ್ಶನ್ (17) ಮೃತ ದುರ್ದೈವಿ.
ಧರ್ಮಸ್ಥಳ ಯಾತ್ರೆ ಮುಗಿಸಿಕೊಂಡು ಗ್ರಾಮಕ್ಕೆ ಬರುವಾಗ ತಿರುವಿನಲ್ಲಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಿಪ್ಪಿದ್ದಾರೆ 12 ಜನ ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳುಗಳಿಗೆ ಆದಿ ಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.