ಬಿಗ್ ಬಾಸ್ ಕನ್ನಡ ಸೀಸನ್ 7 ಸ್ಪರ್ಧಿ ಚೈತ್ರಾ ಕೊಟ್ಟೂರು ವಿರುದ್ಧ ಪ್ರತಿಭಟನೆ…!
ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕೊಟ್ಟೂರು ವಿರುದ್ಧ ಪ್ರತಿಭಟನೆ ಇಂದು ಪ್ರತಿಭಟನೆ ಮಾಡಲಾಗುತ್ತಿದೆ.
ದಲಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಚೈತ್ರಾ ಕೊಟ್ಟೂರು ವಿರುದ್ಧ ಅಂಬೇಡ್ಕರ್ ಸೇನೆಯಿಂದ ಪ್ರತಿಭಟನೆ ಮಾಡಲಾಗುತ್ತಿದೆ. ರಾಮನಗರ ಜಿಲ್ಲೆ ಬಿಡದಿಯಲ್ಲಿರುವ ಇನೋವೇಟಿವ್ ಫಿಲ್ಮಿ ಸಿಟಿಯಲ್ಲಿ ಪ್ರತಿಭಟನಾಕಾರರು ಈ ಕೂಡಲೇ ಬಿಗ್ ಬಾಸ್ ಮನೆಯಿಂದ ಚೈತ್ರಾರನ್ನ ಹೊರಹಾಕಬೇಕೆಂದು ಕಿಚ್ಚ ಸುದೀಪ್ ಗೆ ಒತ್ತಾಯಿಸಿದ್ದಾರೆ.
ಇನೋವೇಟಿವ್ ಫಿಲ್ಮಿ ಸಿಟಿ ಗೇಟ್ ಮುಂಭಾಗ ಸಂಘಟನೆಯ ಕಾರ್ಯಕರ್ತರು ಹೋರಾಟ ಮಾಡುತ್ತಿದ್ದಾರೆ.