ಗೆಲುವಿನ ಸನಿಹವಿರುವ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ : ಕಾರ್ಯಕರ್ತರ ಸಂಭ್ರಮ
ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ 11 ಕ್ಷೇತ್ರಗಳಲ್ಲಿ ಮೇಲುಗೈ ಸಾಧಿಸಿದ್ದು, ಶಿರಸಿಯ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ್ ಕೂಡ ಗೆಲುವಿನ ಸನಿಹದಲ್ಲಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಎನ್ನುವಂತಾಗಿದೆ.
ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ್ 14ನೇ ಸುತ್ತಿನಲ್ಲೂ 27,061 ಮತಗಳ ಮುನ್ನಡೆಯಲ್ಲಿ ಮುನ್ನುಗ್ಗುತ್ತಿದ್ದಾರೆ.
ಹೀಗಾಗಿ ಯಲ್ಲಾಪುರ ಕ್ಷೇತ್ರದ ಶಿವರಾಂ ಹೆಬ್ಬಾರ್ ಗೆಲುವನ್ನು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೆ ಬಾಕಿ ಇದೆ. ಕಾರಣ ಅಂತಿಮ ಹಂತದ ಮತ ಎಣಿಕೆ ಕಾರ್ಯ ನಡೆಯುತ್ತಿರುವುದರಿಂದ ಫೈನಲ್ ಮತ ಎಣಿಕೆ ನಂತರ ಅಧಿಕೃತವಾಗಿ ಗೆಲುವನ್ನು ಚುನಾವಣಾ ಆಯೋಗ ಘೋಷಣೆ ಮಾಡಲಿದೆ.