ರಾಜೀನಾಮೆ ಹಿಂಪಡೆಯುವಂತೆ ಸಿದ್ದರಾಮಯ್ಯರಿಗೆ ಹೈಕಮಾಂಡ್ ಸೂಚನೆ….
ಉಪಚುನಾವಣೆಯಲ್ಲಿ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಹಿಂಪಡೆಯುವಂತೆ ಕಾಂಗ್ರೆಸ್ ಹೈಕಮಾಂಡ್ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚಿಸಿದೆ ಎನ್ನಲಾಗಿದೆ. ರಾಜೀನಾಮೆ ಅಂಗೀಕರಿಸುವಂತೆ ಒಂದು ಬಣ ಒತ್ತಡ ಹಾಕಿದ್ದರೂ ಹೈಕಮಾಂಡ್ ಅದಕ್ಕೆ ಸೊಪ್ಪು ಹಾಕದೆ ತಮ್ಮ ರಾಜೀನಾಮೆ ಹಿಂಪಡೆದು ಶಾಶಕಾಂಗ ನಾಯಕನಾಗಿ ಉಳಿಯುವಂತೆ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
ಖುದ್ದು ಪಕ್ಷಾಧ್ಯಕ್ಷೆ ಸೋನಿಯಾ ಗಾಂಧಿ ಆಪ್ತ ಅಹ್ಮದ್ ಪಟೇಲ್ ಅವರೇ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ರಾಜೀನಾಮೆ ಅಂಗೀಕಾರಕ್ಕೆ ಒತ್ತಾಐ ಮಾಡದೇ ಶಾಸಕಾಂಗ ಪಕ್ಷದ ನಾಯಕನಾಗಿ ಮುಂದುವರಿಯುವಂತೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ಅಹ್ಮದ್ ಪಟೇಲ್ ಅವರ ಈ ಮನವಿಯನ್ನು ಸಿದ್ದರಾಮಯ್ಯ ನಯವಾಗಿಯೇ ತಿರಸ್ಕರಿಸಿದ್ದು ನಿರ್ಧಾರ ಕೈಗೊಳ್ಳಲು ಎರಡು ದಿನಗಳ ಕಾಲಾವಕಾಶ ಕೇಳಿದ್ದಾರೆ. ಆದರೆ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಸಾಧ್ಯತೆ ಇಲ್ಲ ಎಂದು ಮೂಲಗಳು ಹೇಳಿವೆ.
ಪಕ್ಷದ ಹಿರಿಯ ನಾಐಕರು ನಿರೀಕ್ಷತ ಮಟ್ಟದಲ್ಲಿ ಸಹಕಾರ ನೀಡುತ್ತಿಲ್ಲ. ಈ ಕಾರಣ ಯಾವುದೇ ಹೊಣೆಗಾರಿಕೆ ಬೇಡ. ಬೇರೆಯವರಿಗೂ ಅವಕಾಶ ಕೊಡಿ ಎಂದು ಸಿದ್ದರಾಂಯ್ಯ ಅವರಯ ಪಟೇಲರಿಗೆ ಹೇಳಿದ್ದಾರೆಂದು ತಿಳಿದುಬಂದಿದೆ.