ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ : ರಾಮಚಂದ್ರ ಗುಹ ಬಂಧನ..!

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಆದರೆ ಸರ್ಕಾರ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿದೆ. ಹೀಗಿದ್ದರೂ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಬೆಂಗಳೂರಿನ ಟೌನ್ ಹಾಲ್ ಬಳಿಯೂ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಯಿತು. ಈ ವೇಳೆ ಪೊಲೀಸರು ಖ್ಯಾತ ಇತಿಹಾಸಕಾರ ರಾಮಚಂದ್ರ ಗುಹ ಸೇರಿ ಹಲವರನ್ನು ಬಂಧಿಸಿದ್ದಾರೆ.

ಪ್ರತಿಭಟನೆ ನಡೆಯುವ ಮುನ್ಸೂಚನೆ ಇದ್ದಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸರು 144 ಸೆಕ್ಷನ್ ಜಾರಿ ಮಾಡಿದ್ದರು. ಆದರೂ ಸಹ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಇದೀಗ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರ ಮೇಲೆ ಲಘು ಲಾಠಿ ಪ್ರಹಾರ ನಡೆಸಿ, ವಶಕ್ಕೆ ಪಡೆಯುತ್ತಿದ್ದಾರೆ.

ಪೊಲೀಸ್ ವಾಹನ, ಬಿಎಂಟಿಸಿ ಬಸ್ ಸಾಕಾಗದೆ, ಸಿಕ್ಕ ಸಿಕ್ಕ ಖಾಸಗಿ ವಾಹನಗಳನ್ನೂ ಬಳಸಿ ಪ್ರತಿಭಟನಾಕಾರರನ್ನು ಸಾಗಿಸುತ್ತಿದ್ದು, ಖಾಸಗಿ ಬಸ್, ಆಟೋ, ಟಿಟಿ ವಾಹನಗಳು ಸೇರಿದಂತೆ ಇತೆ ವಾಹನಗಳಲ್ಲಿ ಸಾಗಿಸುತ್ತಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights