ಕಳಸಾ ಬಂಡೂರಿ ವಿಚಾರದಲ್ಲಿ ಮತ್ತೆ ಅನ್ಯಾಯ- ಕೇಂದ್ರ ಸಚಿವರಿಗೆ ಬಹಿರಂಗ ಪತ್ರ ಬರೆದ ಹೋರಾಟಗಾರ…!
ಕಳಸಾ ಬಂಡೂರಿ ಯೋಜನೆ ವಿಚಾರದಲ್ಲಿ ಉತ್ತರ ಕರ್ನಾಟಕ ಜನರ ಹೋರಾಟಕ್ಕೆ ಬೆಲೆ ಇಲ್ಲದಂತಾಗಿದೆ. ಕೇಂದ್ರ ಸರ್ಕಾರ ರಾಜ್ಯದ ಮೇಲೆ ನಿರಂತರವಾಗಿ ಮಲತಾಯಿ ಧೋರಣೆ ಅನುಸರಿಸಿದೆ. ಕಳಸಾ ಬಂಡೂರಿ ವಿಚಾರದಲ್ಲಿ ಎಲ್ಲವೂ ಮುಗಿತು ನ್ಯಾಯಾಧೀಕರಣ ತೀರ್ಪು ಸಹ ಬಂತು. ಇನ್ನೇನು ಕಾಮಗಾರಿ ಆರಂಭವಾಗಿ ಬೆಳಗಾವಿ, ಧಾರವಾಡ, ಗದಗ ಹಾಗೂ ಬಾಗಲಕೋಟೆ ಜಿಲ್ಲೆ ಜನರಿಗೆ ಅನಕೂಲ ಆಗಲಿದೆ ಎಂದೇ ರೈತರು ನೀರಿಕ್ಷಿಸಿದ್ದರು.
ಆದರೇ ಸದ್ಯ ಯೋಜನೆ ಪೂರ್ಣಗೊಳಿಸಲು ಅರಣ್ಯ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸಬೇಕಿದೆ. ಈ ಮೊದಲು ಅನುಮತು ನೀಡಿದ್ದ ಕೇಂದ್ರ ಅರಣ್ಯ ಇಲಾಖೆ ಸದ್ಯ ಅನುಮತಿಯನ್ನು ಅಮಾನತ್ತಿನಲ್ಲಿ ಇಟ್ಟು ಆದೇಶ ಹೊರಡಿಸಿದೆ. ಈ ಆದೇಶ ಉತ್ತರ ಕರ್ನಾಟಕ ಜನರ ಕೆಂಗಣ್ಣಿಗೆ ಗುರಿಯಾಗಿದೆ.
ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆಯಿಂದ ಹುಬ್ಬಳ್ಳಿ- ಧಾರವಾಡ ಸೇರಿ ಅನೇಕ ಪಟ್ಟಣಗಳ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥವಾಗಲಿದೆ. ಆದರೇ ಯೋಜನೆ ಪೂರ್ಣಕ್ಕೆ ಅನೇಕ ವಿಘ್ನಗಳು ಎದುರಾಗುತ್ತಲೇ ಇವೆ. ಈ ಭಾಗದ ಜನರ ಹೋರಾಟಕ್ಕೆ ಸರ್ಕಾರ ಯಾವುದೇ ಮಣೆ ಹಾಕದೇ ಇರೋದು ಆಕ್ರೋಶಕ್ಕೆ ಕಾರಣವಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರದಲ್ಲಿ ಹುಬ್ಬಳ್ಳಿ ಸಂಸದ ಪ್ರಲ್ಹಾದ್ ಜೋಶಿ, ಬೆಳಗಾವಿ ಸಂಸದ ಸುರೇಶ ಅಂಗಡಿ ಸಹ ಸಚಿವರಾಗಿದ್ದಾರೆ. ಇಬ್ಬರಿಗೂ ಪರಿಸರ ಇಲಾಖೆ ನೀಡಿರೋ ತಡೆಯ ಬಗ್ಗೆ ಮಾಹಿತಿಯೆ ಇಲ್ಲವೆ. ಈ ಬಗ್ಗೆ ಪ್ರಧಾನಿ ಬಳಿ ಇಬ್ಬರು ಸಚಿವರು ಮಾತನಾಡಲಿದ್ದಾರೆ ಎಂಬ ನಿರೀಕ್ಷೆಗಳು ಜನರಲ್ಲಿ ಇವೆ. ಆದರೇ ಇಬ್ಬರು ಸಚಿವರು ಮೌನ ವಹಿಸಿದ್ದು, ಇದೀಗ ಬೆಳಗಾವಿಯ ಕನ್ನಡ ಪರ ಹೋರಾಟಗಾರ ಅಶೋಕ ಚಂದರಗಿ ಬಹಿರಂಗ ಪತ್ರ ಬರೆದು ತರಾಟೆಗೆ ತೆಗೆದುಕೊಂಡಿದ್ದಾರೆ. ಜತೆಗೆ ಇಬ್ಬರು ಕೇಂದ್ರ ಸಚಿವರಿಗೆ 10 ಪ್ರಶ್ನೆಗಳನ್ನು ಕೇಳಿದ್ದಾರೆ. ಈ ಪತ್ರ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದೆ. ಇನ್ನಾದರೂ ಪ್ರಧಾನಿ ಬಳಿ ಇಬ್ಬರು ಸಚಿವರು ಯೋಜನೆ ಬಗ್ಗೆ ಮಾತನಾಡಲಿದ್ದಾರೆ ಎಂಬ ಬಗ್ಗೆ ಕಾದು ನೋಡಬೇಕು.