ಉಪಚುನಾವಣೆ ಫಲಿತಾಂಶ : ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ – ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
ಉಪಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಅಲ್ಲದೆ ಯಲ್ಲಾಪುರ, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ಗೆ ಹಿನ್ನಡೆಯಾಗಿದ್ದರ ಬಗ್ಗೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಜನರು ತಪ್ಪು ಮಾಡಿದವರನ್ನೇ ಒಪ್ಪಿಕೊಂಡಿದ್ದಾರೆ. ಹಾಗಾಗಿ ನಾವು ಈ ಸೋಲನ್ನು ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ.
ಕಳೆದ ಮೈತ್ರಿ ಸರ್ಕಾರಕ್ಕೆ ರಾಜೀನಾಮೆ ನೀಡಿದ್ದ 15 ಶಾಸಕರ ಕ್ಷೇತ್ರಗಳಿಗೆ ಡಿ.5ರಂದು ಚುನಾವಣೆ ನಡೆದಿತ್ತು. ಇಂದು ಮತ ಎಣಿಕೆ ನಡೆಯುತ್ತಿದ್ದು 12 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.