ಅಶೋಕ್ ಗಸ್ತಿ ಆರೋಗ್ಯ ಗಂಭೀರ; ಐಸಿಯುನಲ್ಲಿ ಚಿಕಿತ್ಸೆ: ಕುಟುಂಬ ಸ್ಪಷ್ಟನೆ
ಕೊರೊನಾ ಸೋಂಕಿನಿಂದ ಬಳಲುತ್ತಿರುವ ರಾಜ್ಯಸಭೆ ಸದಸ್ಯ ಅಶೋಕ ಗಸ್ತಿ ಅವರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಕೆಲವು ಸಾಮಾಜಿಕ ಜಾಲತಾಣ ಹಾಗೂ ಖಾಸಗಿ ವಾಹಿನಿಗಳಲ್ಲಿ ನಿಧನರಾಗಿದ್ದಾರೆ ಎಂದು ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂದು ಕುಟುಂಬದ ಸದಸ್ಯರು ಬೇಸರ ವ್ಯಕ್ತಪಡಿಸಿದ್ದಾರೆ.
ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಅಶೋಕ ಗಸ್ತಿ ಅವರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.