ಎಸ್‌ಎಸ್‌ಆರ್ ಡೆತ್ ಕೇಸ್: ಸಲ್ಮಾನ್-ಕರಣ್ ಜೋಹರ್ ಸೇರಿದಂತೆ 8 ಬಿ-ಟೌನ್ ಖ್ಯಾತನಾಮರಿಗೆ ಅ.7 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್

ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮುಜಾಫರ್ಪುರ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿ ಸಲ್ಮಾನ್ ಖಾನ್, ಕರಣ್ ಜೋಹರ್ ಸೇರಿದಂತೆ 8 ಬಾಲಿವುಡ್ ಸೆಲೆಬ್ರಿಟಿಗಳನ್ನು ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಿದೆ. ಇವರೆಲ್ಲರೂ ನ್ಯಾಯಾಲಯದಲ್ಲಿ ಹಾಜರಾಗುವುದನ್ನು ಸ್ವತಃ ಅಥವಾ ತಮ್ಮ ವಕೀಲರ ಮೂಲಕ ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾ ನ್ಯಾಯಾಲಯ ಹೇಳಿದೆ.

ಇದರೊಂದಿಗೆ ನ್ಯಾಯಾಲಯ ಅವರ ಉಪಸ್ಥಿತಿಗೆ ದಿನಾಂಕವನ್ನು ನಿಗದಿಪಡಿಸಿದ್ದು ಅವರು ಅಕ್ಟೋಬರ್ 7, 2020 ರಂದು ನ್ಯಾಯಾಲಯಕ್ಕೆ ಹಾಜರಾಗಬೇಕಾಗಿದೆ. ಸಲ್ಮಾನ್ ಖಾನ್, ಕರಣ್ ಜೋಹರ್, ಆದಿತ್ಯ ಚೋಪ್ರಾ, ಸಂಜಯ್ ಲೀಲಾ ಭನ್ಸಾಲಿ, ಏಕ್ತಾ ಕಪೂರ್, ಸಾಜಿದ್ ನಾಡಿಯಾಡ್ವಾಲಾ, ಭೂಷಣ್ ಕುಮಾರ್ ಮತ್ತು ದಿನೇಶ್ ವಿಜಯನ್ ಅವರ ದೂರಿನ ಮೇರೆಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಕೋರಿದೆ.

ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ವಕೀಲ ಸುಧೀರ್ ಓಜಾ ಜೂನ್ 17 ರಂದು ಮುಜಾಫರ್ಪುರ ಸಿಜೆಎಂ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಇವರೆಲ್ಲರನ್ನೂ ಹೊಣೆಗಾರರನ್ನಾಗಿ ಮಾಡಿಕೊಂಡು ಐಪಿಸಿಯ ಸೆಕ್ಷನ್ 306, 504 ಮತ್ತು 506 ರ ಅಡಿಯಲ್ಲಿ ದೂರು ದಾಖಲಿಸಿದ್ದರು. ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ 14 ರಂದು ಮುಂಬೈನ ತಮ್ಮ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights