ತಲವಾರು ಹಿಡಿದು ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದ್ದ ತುಳು ನಟ ಸುರೇಂದ್ರ ಬಂಟ್ವಾಳ್ ಹತ್ಯೆ..!

ಬಂಟ್ವಾಳದ ಬಿ.ಸಿ.ರೋಡ್ ನ ಫ್ಲಾಟ್ ನಲ್ಲಿ ತುಳು ನಟ ಸುರೇಂದ್ರ ಬಂಟ್ವಾಳ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸುರೇಂದ್ರ ಬಂಟ್ವಾಳ್ ಅವರನ್ನು ದುಷ್ಕರ್ಮಿಗಳು ಇಂದು ಬೆಳಗ್ಗೆ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಕೋಸ್ಟಲ್ ವುಡ್ ನಟ ಸುರೇಂದ್ರ ಬಂಟ್ವಾಳ್ ಈ ಹಿಂದೆ ತಲವಾರು ಹಿಡಿದು ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದ್ದ ವೀಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. 2018ರ ಜೂನ್ ನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದನಕ್ಕೊಳಗಾಗಿದ್ದರು. ಜೈಲು ಸೇರಿದ್ದ ಸುರೇಂದ್ರ ಜಾಮೀನಿನ ಮೇಲೆ ಹೊರಬಂದಿದ್ದರು.

ಹಣಕಾಸು ವ್ಯವಹಾರ ಮಾಡುತ್ತಾ ಕೆಲ ತುಳು ಚಿತ್ರಗಳಲ್ಲಿ ನಟಿಸಿದ್ದ ನಟ ಸುರೇಂದ್ರ ಬಂಟ್ವಾಳ್ ಅವರನ್ನು ಹಣಕಾಸು ವಿಚಾರಕ್ಕೆ ಜೊತೆಗಿದ್ದ ವ್ಯಕ್ತಿಗಳು ಬಂಟ್ವಾಳ್ ಅವರನ್ನು ಹತ್ಯೆ ಮಾಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.

ಕನ್ನಡ ಚಿತ್ರ ಸವರ್ಣದೀರ್ಘ ಸಂಧಿ ಸೇರಿದಂತೆ ಹಲವು ತುಳು ಚಿತ್ರಗಳಲ್ಲಿ ಸುರೇಂದ್ರ ಬಂಟ್ವಾಳ ನಟಿಸಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights