ನಿಲ್ಲದ ಹೆಣ್ಣು ಭ್ರೂಣ ಹತ್ಯೆ: ಬಲವಂತದ ಗರ್ಭಪಾತದಿಂದ ಮಹಿಳೆ ಸಾವು!

ಮೂರನೇ ಮಗುವೂ ಹೆಣ್ಣು ಎಂಬ ಕಾರಣಕ್ಕೆ ಬಲವಂತವಾಗಿ ಗರ್ಭಪಾತ ಮಡಲಾಗಿದ್ದು, 28 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಜಿಲ್ಲೆಯ ಬಾಗೆಪಲ್ಲಿಯ ಪೋಲವರಪಲ್ಲಿ ಗ್ರಾಮದ ನಿವಾಸಿ ಶ್ರೀಕನ್ಯಾ ಅವರು 2014 ರಲ್ಲಿ ಕೊಥಪಲ್ಲಿ ಗ್ರಾಮದ ನಿವಾಸಿ 38 ವರ್ಷದ ಸೋಮಶೇಖರ್ ಅವರನ್ನು ವಿವಾಹವಾಗಿದ್ದರು. ನಂತರ ಇಬ್ಬರು ಹೆಣ್ಣುಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಅಕೆಯ ಗಂಡನ ಕುಟುಂಬದವರು ಗಂಡು ಮಗುವನ್ನು ಬಯಸಿದ್ದರು ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಈ ಮಹಿಳೆಗೆ ಎರಡು ಹೆಣ್ಣು ಮಗು ಜನಿಸಿತ್ತು. ಆದರೆ ಅಕೆಯ ಗಂಡನಿಗೆ ಗಂಡು ಮಗುವಿನ ಮೇಲೆ ವ್ಯಾಮೋಹವಿತ್ತು. ಹಾಗಾಗಿ ಮೂರನೇ ಮಗುವೂ ಹೆಣ್ಣಾದರೆ ಎಂಬ ಕಾರಣಕ್ಕೆ ಅಕ್ರಮವಾಗಿ ಲಿಂಗಪತ್ತೆ ಮಾಡಿಸಿದ್ದರು. ಅದರಲ್ಲಿ ಮೂರನೆಯದೂ ಹೆಣ್ಣುಮಗು ಎಂದು ತಿಳಿದಾಗ ಬಲವಂತವಾಗಿ ಗರ್ಭಪಾತ ಮಾಡಿಸಿದ್ದರು. ಇದರ ನಂತರ ಮಹಿಳೆಯ ಆರೋಗ್ಯ ದಿನೇ-ದಿನೇ ಹದಗೆಟ್ಟು ಕೊನೆಗೆ ಸಾವನ್ನಪ್ಪಿದಳು” ಎಂದು ತನಿಖಾಧಿಕಾರಿ ಹೇಳಿದರು.

ಇದನ್ನೂ ಓದಿ: ಅಧಿಕಾರವಿದ್ದರೂ ನಿಲ್ಲದ ಶೋಷಣೆ; ಪಂಚಾಯತ್ ದಲಿತ‌ ಅಧ್ಯಕ್ಷರ ಮೇಲೆ ನಡೆಯುತ್ತಿವೆ ನಿರಂತರ ದೌರ್ಜನ್ಯಗಳು!

ಘಟನೆಯ ನಂತರ, ಶ್ರೀಕನ್ಯಾ ಅವರ ತಂದೆ ಶ್ರೀನಿವಾಸ್ ಬಾಗೆಪಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ತನಿಖೆಯಲ್ಲಿ ಬಲಿಪಶುವಿನ ಸ್ವಂತ ತಾಯಿ ಮತ್ತು ಸಹೋದರ ಗರ್ಭಪಾತ ಮಾಡಿಸಿದ್ದರು ಎಂದು ತಿಳಿದುಬಂದಿದೆ.

ಕೇಂದ್ರ ಶ್ರೇಣಿಯ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಸೆಮಂತ್ ಕುಮಾರ್ ಸಿಂಗ್ ಮಾತನಾಡಿ, “ವಿವರವಾದ ತನಿಖೆಗೆ ಆದೇಶಿಸಲಾಗಿದ್ದು, ಈ ಘೋರ ಅಪರಾಧದಲ್ಲಿ ಭಾಗಿಯಾಗಿರುವ ಎಲ್ಲರನ್ನು ಬಂಧಿಸಲಾಗುವುದು. ಪ್ರಸ್ತುತ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಹೇಳಿದರು.


ಇದನ್ನೂ ಓದಿ: ಉಪಚುನಾವಣೆಗೆ JDS ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ವ್ಯರ್ಥ: ಹೆಚ್‌ಡಿಕೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights