ರೈತರ ವಿರುದ್ದ ಸರ್ಕಾರಗಳು ಗೆದ್ದಿರುವ ಇತಿಹಾಸವಿಲ್ಲ; ಗೆಲ್ಲುವುದೂ ಇಲ್ಲ: ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್
ಯಾವ ಸರ್ಕಾರವೂ ರೈತರ ವಿರುದ್ಧ ಗೆಲುವು ಪಡೆದ ಇತಿಹಾಸವಿಲ್ಲ. ನೀವು ಇತಿಹಾಸದಿಂದ ಪಾಠ ಕಲಿಯದಿದ್ದರೆ, ಇತಿಹಾಸವು ಮರುಕಳಿಸುತ್ತಲೇ ಇರುತ್ತದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಮೂರು ಹೊಸ ಕೃಷಿ ಕಾಯ್ದೆಗಳ ವಿರುದ್ದ ಪ್ರತಿಭಟನೆ ನಡೆಸುತ್ತಿರುವ ರೈತರು ನಿನ್ನೆ (ಮಂಗಳವಾರ) ಜನಗಣತಂತ್ರ ಪರೇಡ್ ನಡೆಸಿದ್ದಾರೆ. ಈ ವೇಳೆ, ಕೆಂಪುಕೋಟೆಯತ್ತ ಹೊರಟಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು ದಾಳಿ ನಡೆಸಿದ್ದಾರೆ. ಒಬ್ಬ ರೈತ ಮೃತ ಪಟ್ಟಿದ್ದಾರೆ.
ಈ ಬಗ್ಗೆ ತಮ್ಮ ಟ್ವೀಟ್ನಲ್ಲಿ ಪ್ರತಿಕ್ರಿಯಿರುವ ನವಜೋತ್ ಸಿಂಗ್ ಸಿಧು, ‘ಯಾವ ಸರ್ಕಾರವೂ ರೈತರ ವಿರುದ್ಧ ಗೆಲುವು ಪಡೆದ ಇತಿಹಾಸವಿಲ್ಲ. ನೀವು ಇತಿಹಾಸದಿಂದ ಪಾಠ ಕಲಿಯಬೇಕು. ಇಲ್ಲದಿದ್ದರೆ ಇತಿಹಾಸವು ಮರುಕಳಿಸುತ್ತಲೇ ಇರುತ್ತದೆ. ಇತಿಹಾಸವು ನಮಗೆ ಹೇಳುವುದೇನೆಂದರೆ, ರೈತರ ವಿರುದ್ಧ ಯಾವ ಸರ್ಕಾರವೂ ಗೆಲುವು ಪಡೆದ ಚರಿತ್ರೆಯಿಲ್ಲ ಎಂದಾಗಿದೆ’ ಎಂದು ಹೇಳಿದ್ದಾರೆ.
If you don’t learn your lessons from history, it repeats itself … History tells us “No Government has ever won against the Farmers.“
— Navjot Singh Sidhu (@sherryontopp) January 26, 2021
ಕೃಷಿ ಕಾಯ್ದೆಗಳ ವಿರುದ್ಧ ರೈತರ ಹೋರಾಟ ಮೂರನೇ ತಿಂಗಳಿಗೆ ಕಾಲಿಟ್ಟಿದ್ದೆ. ದೆಹಲಿಯ ಕೊರೆವ ಚಳಿಯಲ್ಲಿಯೂ ರೈತರು ಶಾಂತಿಯುವ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆಯೂ ಗಣತಂತ್ರ ಟ್ರಾಕ್ಟರ್ ಪರೇಟ್ 99% ಶಾಂತಿಯುತವಾಗಿ ನಡೆಸಿದೆ. ಕೃಷಿ ನೀತಿಗಳು ರದ್ದಾಗುವವರೆಗೂ ಹೋರಾಟ ಮುಂದುವರೆಯುತ್ತದೆ ಎಂದು ರೈತರು ಹೇಳಿದ್ದಾರೆ.
ಇದನ್ನೂ ಓದಿ: ಆಘಾತಕಾರಿ ಸುದ್ದಿ: ಕೆಂಪುಕೋಟೆಯಲ್ಲಿ ಸಿಖ್ ಧ್ವಜ ಹಾರಿಸಿದ್ದು BJP ಕಾರ್ಯಕರ್ತ ದೀಪ್ ಸಿಧು