ಮಂಗಳೂರು: ರಾಜ್ಯೋತ್ಸವ ಆಚರಣೆಯ ವೇಳೆ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿದ ಸಚಿವ ಅಂಗಾರ!

ದಕ್ಷಿಣ ಕನ್ನಡ ಜಿಲ್ಲಾಡಳಿತ ಸೋಮವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಆಚರಣೆ ವೇಳೆ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಲಾಗಿದ್ದು, ನಂತರ ಸರಿಪಡಿಸಿರುವ ಘಟನೆ ನಡೆಸಿರುವುದಾಗಿ ವರದಿಯಾಗಿದೆ.

ಮಂಗಳೂರಿನ ನೆಹರು ಮೈದಾನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರು ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿದ್ದಾರೆ. ಳಿಕ ಕೆಲ ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಅದನ್ನು ಕೆಳಗಿಳಿಸಿ ಮತ್ತೆ ಹಾರಿಸಲಾಗಿದೆ.

ಈ ಮುಜುಗರದ ಸಂಗತಿ ಕಂಬಕ್ಕೆ ಧ್ವಜ ಕಟ್ಟಿದವರ ತಪ್ಪಿನಿಂದ ನಡೆದಿದೆ ಎಂದು ಹೇಳಲಾಗಿದೆ.

ಕಾರ್ಯಕ್ರಮದಲ್ಲಿ ದ.ಕ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ದ.ಕ.ಡಿಸಿ ಡಾ. ರಾಜೇಂದ್ರ ಕೆ.ವಿ, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮತ್ತಿತರು ಭಾಗವಹಿಸಿದ್ದರು.

ಇದನ್ನೂ ಓದಿ: ಸಿಎಂ ಅನಿಲ ಭಾಗ್ಯ ಯೋಜನೆ ರದ್ದು ಮಾಡಲು ಸರ್ಕಾರ ನಿರ್ಣಯ; ಫಲಾನುಭವಿಗಳ ಗತಿ ಏನು?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights