FACT CHECK | ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ಪಡೆಯಲು ಸರದಿ ಸಾಲಿನಲ್ಲಿ ನಿಂತ ಮಹಿಳೆ ಸಾವನಪ್ಪಿದ್ದು ನಿಜವೇ?
2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಿಸಿದ ‘ಘರ್ ಘರ್ ಗ್ಯಾರಂಟಿ’ ಅಡಿಯಲ್ಲಿ ಮಹಾಲಕ್ಷ್ಮಿ ಯೋಜನೆಗೆ ಅರ್ಜಿ ನಮೂನೆಯನ್ನು ಸಲ್ಲಿಸಲು ತೆರಳಿದ್ದ ಅಮೇಥಿಯ ಮಹಿಳೆಯೊಬ್ಬರು ಸರದಿಯಲ್ಲಿ ನಿಂತು ಬಿಸಿಗಾಳಿಯಿಂದ ಸಾವನ್ನಪ್ಪಿದ್ದಾರೆ ಎಂದು ಪ್ರತಿಪಾದಿಸಿ ಪೋಸ್ಟ್ವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾದ ಪೋಸ್ಟ್ಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.
ವಾಸ್ತವವಾಗಿ ಕಾಂಗ್ರೆಸ್ 2024ರ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಅವರು ಘೋಷಿಸಿದ್ದ ಯೋಜನೆಗಳ್ನು ಜಾರಿಗೆ ತರುತ್ತೇವೆ ಎಂದು ಹೇಳಿದ್ದರು. ಆದರೆ ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಿರುವ ಪೋಸ್ಟ್ ಅನುಮಾನಕ್ಕೆ ಕಾರಣವಾಗುತ್ತದೆ. ಹಾಗಾಗಿ ಪೋಸ್ಟ್ನಲ್ಲಿ ಹಂಚಿಕೊಳ್ಳಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್ನಲ್ಲಿ ಸರ್ಚ್ ಮಾಡಿದಾಗ, ಯಾವುದೇ ಕಾಂಗ್ರೆಸ್ ಕಚೇರಿಯ ಬಳಿ ಹಿರಿಯ ಮಹಿಳೆಯೊಬ್ಬರು ಬಿಸಿಗಾಳಿಯ ಶಾಖದ ಅಲೆಯಿಂದ ಸಾವನ್ನಪ್ಪಿದಂತಹ ವರದಿಗಳು ಲಭ್ಯವಾಗಿಲ್ಲ.
ಆದರೆ,‘ಘರ್ ಘರ್ ಗ್ಯಾರಂಟಿ’ (ಇಲ್ಲಿ ಮತ್ತು ಇಲ್ಲಿ) ಭಾಗವಾಗಿ ಮಹಾಲಕ್ಷ್ಮಿ ಯೋಜನೆಯಡಿ ತಿಂಗಳಿಗೆ 8,500 ರೂ. ಗ್ಯಾರಂಟಿ ಕಾರ್ಡ್ ಪಡೆಯಲು ಹಲವು ಮಹಿಳೆಯರು ಕಾಂಗ್ರೆಸ್ ಕಚೇರಿಗಳ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.
ಘಟನೆ ಬಗ್ಗೆ ಮತ್ತಷ್ಟು ತನಿಖೆ ನಡೆಸಿದ ನಂತರ ಅಮೇಥಿ ಪೊಲೀಸರು ತಮ್ಮ ವಿಚಾರಣೆಯಲ್ಲಿ ಕಾಂಗ್ರೆಸ್ ಕಚೇರಿಯ ಮುಂದೆ ಅಂತಹ ಯಾವುದೇ ಘಟನೆ ನಡೆದಿರುವುದು ಪತ್ತೆಯಾಗಿಲ್ಲ ಎಂದು ಎಕ್ಸ್ ಪೋಸ್ಟ್ ಮೂಲಕ ಸ್ಪಷ್ಟಪಡಿಸಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವ ಸಂದೇಶ ನಕಲಿ ಎಂದು ತಿಳಿಸಿದ್ದಾರೆ. ಹಾಗಾಗಿ ಕಾಂಗ್ರೆಸ್ ಘೋಷಿಸಿದ ‘ಘರ್ ಘರ್ ಗ್ಯಾರಂಟಿ’ ಅಡಿಯಲ್ಲಿ ಮಹಾಲಕ್ಷ್ಮಿ ಯೋಜನೆಗೆ ಅರ್ಜಿ ನಮೂನೆಯನ್ನು ಸಲ್ಲಿಸಲು ತೆರಳಿದ್ದ ಅಮೇಥಿಯ ಮಹಿಳೆಯೊಬ್ಬರು ಸರದಿಯಲ್ಲಿ ನಿಂತು ಬಿಸಿಗಾಳಿಯಿಂದ ಸಾವನ್ನಪ್ಪಿದ್ದಾರೆ ಎಂಬ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ಸುಳ್ಳು.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ್ ಗೋಪಿ ಒಂದೇ ದಿನಕ್ಕೆ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ರಾ?