FACT CHECK | ಕರ್ನಾಟಕ ಕಾಂಗ್ರೆಸ್ ಸರ್ಕಾರ ಸರ್ದಾರ್ ಪಟೇಲ್ ಪ್ರತಿಮೆಯನ್ನು ಉರುಳಿಸಿದೆ ಎಂದು ಸುಳ್ಳು ಪೋಸ್ಟ್ ಹಂಚಿಕೆ
ಇತ್ತೀಚೆಗೆ ವಿಡಿಯೋ ಒಂದು ವೈರಲ್ ಆಗಿದ್ದು ಅದರಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಗುಂಪೊಂದು ಟ್ಯಾಕ್ಟ್ರ್ ಬಳಸಿ ಉರುಳಿಸುತ್ತಿರುವುದನ್ನು ಕಾಣಬಹುದಾಗಿದೆ. ಸಾಮಾಜಿಕ ಮಧ್ಯಮಗಳಲ್ಲಿ ಇದು ಕರ್ನಾಟಕದಲ್ಲಿ ನಡೆದ ಘಟನೆ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗುತ್ತಿದೆ.
कर्नाटक के हिन्दुओं ने बीजेपी सरकार को हराकर कांग्रेस पार्टी की सरकार बनाई थी। अब कांग्रेस सरकार की हरकतों और मुस्लिम तुष्टिकरण की पराकाष्ठा के कारण पछता रहे हैं।Think again and again.?? pic.twitter.com/Uyz4jI5P9w
— Vijendra Agarwal (@bijendra_bjp4up) September 1, 2024
ಕರ್ನಾಟಕದಲ್ಲಿ 80% ಹಿಂದೂಗಳಿದ್ದರೂ ಬಿಜೆಪಿ ಸರ್ಕಾರವನ್ನು ಸೋಲಿಸಿ ಕಾಂಗ್ರೆಸ್ ಪಕ್ಷದ ಸರ್ಕಾರವನ್ನು ಅಧಿಕಾರಕ್ಕೆ ತಂದರು, ಆದರೆ ಈಗ ಕಾಂಗ್ರೆಸ್ ಸರ್ಕಾರದ ಮುಸ್ಲಿಮರ ಓಲೈಕೆಯ ಯಾವ ಹಂತಕ್ಕೆ ತಂದು ನಿಲ್ಲಿಸಿದೆ ನೋಡಿ, ಈಗ ಪಶ್ಚಾತಾಪ ಪಡುತ್ತಿದ್ದಾರೆ ಎಂಬ ಹೇಳಿಕೆಯೊಂದಿಎ ಪೋಸ್ಟ್ಅನ್ನು ಹಂಚಿಕೊಳ್ಳಲಾಗಿದೆ.
“ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಹೊಡೆದು ಹಾಕಲಾಗಿದೆ.” ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ಅನ್ನು ಹಂಚಿಕೊಳ್ಳಲಾಗುತ್ತಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದಂತೆ ಬಿಜೆಪಿಯೇತರ ರಾಜ್ಯಗಳ ಮೇಲೆ ಅದರಲ್ಲೂ ದಕ್ಷಿಣ ರಾಜ್ಯಗಳ ಮೇಲೆ ಇಂತಹ ಆರೋಪಗಳನ್ನು ಹೊರಿಸಲಾಗುತ್ತಿದೆ. ಹಾಗಿದ್ದರೆ ಈ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್ನಲ್ಲಿ ಸರ್ಚ್ ಮಾಡಿದಾಗ, ಈ ಘಟನೆ 26 ಜನವರಿ 2024ರಲ್ಲಿ ಮಧ್ಯ ಪ್ರದೇಶದ ಉಜ್ಜಯಿನಿ ಜಿಲ್ಲೆಯ ಮಕಾಡೋನ್ ಪಟ್ಟಣದಲ್ಲಿ ನಡೆದಿದೆ ಎಂದು ಪ್ರಿಂಟ್ ವರದಿ ಮಾಡಿದೆ.
ವಿಡಿಯೋದಲ್ಲಿ ಕೆಡವಲಾಗುತ್ತಿರುವ ಪ್ರತಿಮೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರದ್ದು. ಈ ಪ್ರದೇಶದಲ್ಲಿ ಪಾಟಿದಾರ್ ಸಮುದಾಯದ ಜನರು ಮಾಜಿ ಉಪಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಯನ್ನು ಕೆಡವಲು ಮುಂದಾದಾಗ ಇದಕ್ಕೆ ವಿರೋಧ ವ್ಯಕ್ತವಾಗಿ ಕೋಲಾಹಲ ಉಂಟಾಗಿದೆ. ಮಾತಿನ ಚಕಮಕಿ ಎಷ್ಟು ಹೆಚ್ಚಾಯಿತು ಎಂದರೆ ಎರಡೂ ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸತೊಡಗಿದವು. ಪ್ರಿಂಟ್ ಕೂಡ ಈ ಬಗ್ಗೆ ವರದಿ ಪ್ರಕಟಿಸಿತ್ತು.
ರಾಷ್ಟ್ರ ನಾಯಕರ ಪ್ರತಿಮೆ ನಿಲ್ಲಿಸುವ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ವಾಗ್ವಾದ ನಡೆದಿದೆ. ಮಾಳ್ವಿಯ ಸಮುದಾಯದವರು ಪಟ್ಟಣದ ಪ್ರಮುಖ ವೃತ್ತದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಾಪಿಸಲು ಸಿದ್ದತೆ ನಡೆಸಿದ್ದರು ಆದರೆ ಪಾಟಿದಾರ್ ಸಮುದಾಯದವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಪ್ರತಿಷ್ಟಾಪಿಸಬೇಕು ಎಂದು ಒತ್ತಾಯಿಸಿ ರಾತ್ರೋ ರಾತ್ರಿ ಮೂರ್ತಿಯನ್ನು ಸ್ಥಾಪಿಸಿದ್ದರು. ಇದರಿಂದ ಸಿಟ್ಟಿಗೆದ್ದ ಭೀಮ್ ಆರ್ಮಿ ಕಾರ್ಯಕರ್ತರು ಮೂರ್ತಿಯನ್ನು ತೆರವುಗೊಳಿಸಿದ್ದಾರೆ.
ಸರ್ದಾರ್ ಪಟೇಲ್ ಅವರ ಪ್ರತಿಮೆಯನ್ನು ತೆರೆವುಗೊಳಿಸಿದ್ದರಿಂದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು, ಇದರಲ್ಲಿ ಪೊಲೀಸ್ ಅಧಿಕಾರಿ ಮತ್ತು ಕಾನ್ಸ್ಟೆಬಲ್ ಸೇರಿದಂತೆ ಹಲವಾರು ಜನರು ಗಾಯಗೊಂಡದ್ದರು. ವಾಹನಗಳಿಗೂ ಬೆಂಕಿ ಹಚ್ಚಲಾಗಿತ್ತು . ಈ ಕುರಿತು ಮಧ್ಯ ಪ್ರದೇಶದ ಲಲ್ಲನ್ಟಾಪ್ ಎಂಬ ಸುದ್ದಿ ಮಾಧ್ಯಮ ವರದಿ ಮಾಡಿದ್ದು ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿಸಿದೆ.
ವಾಸ್ತವವಾಗಿ, ಉಜ್ಜಯಿನಿ ಜಿಲ್ಲೆಯ ಮಕ್ಡೋನ್ನ ಮಂಡಿ ಗೇಟ್ ಮತ್ತು ಬಸ್ ನಿಲ್ದಾಣದ ಬಳಿ ಭೂಮಿ ಖಾಲಿಯಾಗಿತ್ತು. ಭೀಮ್ ಆರ್ಮಿ ಡಾ. ಅಂಬೇಡ್ಕರ್ ಅವರ ಪ್ರತಿಮೆಯನ್ನು ಇಲ್ಲಿ ಸ್ಥಾಪಿಸಲು ಬಯಸಿದ್ದರು. ಪಾಟಿದಾರ್ ಸಮುದಾಯದ ಜನರು ಸರ್ದಾರ್ ಪಟೇಲ್ ಅವರ ಪ್ರತಿಮೆಯನ್ನು ಸ್ಥಾಪಿಸಲು ಒತ್ತಾಯಿಸುತ್ತಿದ್ದರು. ಈ ವಿಷಯ ಪಂಚಾಯಿತಿಯಲ್ಲಿತ್ತು. ಆದರೆ 2024ರ ಜನವರಿ 24ರ ರಾತ್ರಿ ಯಾರೋ ಸರ್ದಾರ್ ಪಟೇಲರ ಪ್ರತಿಮೆಯನ್ನು ಅಲ್ಲಿ ಸ್ಥಾಪಿಸಿದರು.
ಈ ವಿಷಯ ತಿಳಿದ ಇತರ ಸಮುದಾಯದವರು 25 ಜನವರಿ 2024ರ ಬೆಳಗ್ಗೆ ಸ್ಥಳದಲ್ಲಿ ಜಮಾಯಿಸಿ ಟ್ರ್ಯಾಕ್ಟರ್ನಿಂದ ಹೊಡೆದು ವಿಗ್ರಹವನ್ನು ಕೆಡವಿದರು. ನಂತರ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಘರ್ಷಣೆಗೆ ಕಾರಣವಾಯಿತು. ಸರ್ದಾರ್ ಪಟೇಲ್ ಪ್ರತಿಮೆ ಉರುಳಿಸಿದ ಹಿನ್ನೆಲೆ ಮಾಕ್ರೋನ್ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಘಟನೆಯಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ಧ್ವಂಸಗೊಂಡಿವೆ. ಈ ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು ಎಂದು ವರದಿಯಲ್ಲಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ಕರ್ನಾಟಕಕ್ಕೂ ಈ ವೈರಲ್ ಆಗಿರುವ ಗಟಟನೆಗೂ ಯಾವುದೇ ಸಂಬಂಧವಿಲ್ಲ. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸುತ್ತಿರುವ ವೀಡಿಯೋವನ್ನು ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ನಮಾಜ್ ಮಾಡಿದ ವ್ಯಕ್ತಿಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆದಿದ್ದು ನಿಜವೇ?